Showing posts with label ಪಾಲಿಸೋ ಯತಿರಾಜ ಪಾಲಿಸೋ prasannashreenivasa vyasaraja stutih. Show all posts
Showing posts with label ಪಾಲಿಸೋ ಯತಿರಾಜ ಪಾಲಿಸೋ prasannashreenivasa vyasaraja stutih. Show all posts

Friday 27 December 2019

ಪಾಲಿಸೋ ಯತಿರಾಜ ಪಾಲಿಸೋ ankita prasannashreenivasa vyasaraja stutih

by ಪ್ರಸನ್ನ ಶ್ರೀನಿವಾಸದಾಸರು
ಶ್ರೀವ್ಯಾಸರಾಜರು

 ..


kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru


ಪಾಲಿಸೋ ಯತಿರಾಜ ಪಾಲಿಸೋ

ಪಾಲಿಸೋ ಮುನಿ ವ್ಯಾಸ ರಾಜ | ಜಗ -

ತ್ತಲ್ಲಿ ನಿನ್ಮಹಿಮೆ ಸುಭ್ರಾಜ | ಅಹ |

ಕಾಲಲ್ಲಿ ಶರಣಾದೆ ಶ್ರೀ ಲೋಲ ಪ್ರಿಯ ನಿನ್ನ

ಆಳೆಂದು ಗಣಿಸಿ ಪಾಲಿಪುದೆನ್ನ ಪ್ರತಿಕ್ಷಣ | ಪಾಲಿಸೋ | ಪ


ದಿನಪ ಸುತೇಜ ಬ್ರಹ್ಮಣ್ಯ | ತೀರ್ಥ

ಮುನಿಸಾರ್ವಭೌಮರ ದಿವ್ಯ | ಚಾರು

ವನರುಹ ಕರದಿಂದ ಉದಯ | ಇನ್ನು

ಏನೆಂಬೆ ನಿನ್ನ ಪ್ರಾಬಲ್ಯ | ಅಹ |

ದೀನ ವತ್ಸಲ ನಿನ್ನ ಶರಣು ಹೊಕ್ಕೆನು ನಾನು

ಎನ್ನ ಭಾಗ್ಯೋದಯ ತವ ಕಾರುಣ್ಯದಿ ಇನ್ನು 1

ಕರುಣಿ ಸುಶಾಂತ ಸುವರ್ಣ | ವರ್ಣ

ತೀರುಥಕರ ಕಂಜೋತ್ಪನ್ನ | ಸು

ಸ್ಥಿರ ವರಭಕ್ತಿ ವಿಜ್ಞಾನ | ಸಂ -

ಪನ್ನ ಶ್ರೀ ಪಾದಾರ್ಯರನ್ನ | ಅಹ |

ಸೇರಿ ಸೇವಿಸಿ ವಾದಿ ಕರಿ ಪಂಚಾನನಾದ

ಸೂರಿ ಸಜ್ಜನನುತ ವ್ಯಾಸ ಮುನೀಂದ್ರ 2

ಮಾಲೋಲ ಕೃಷ್ಣಸುಪ್ರಿಯರು | ನಿತ್ಯ

ಕಾಳೀಶ ನಿಮ್ಮೋಳ್ ಪ್ರಚುರರು | ಮತ್ತು

ವ್ಯಾಳೇಶ ಅಂಶ ಸಂಯುತರು | ಎಂದು

ಹೇಳೋರು ಹೀಗೆ ವಿಬುಧರು | ಅಹ |

ಕೀಳುವಿಷಯದಿ ಎನ್ ಮನ ಸೋಲದೇ ಹೊರ

ಒಳಗಿಪ್ಪ ಹರಿರೂಪ ವ್ಯಾಳೆ ವ್ಯಾಳೆಗೆ ತೋರು 3

ದ್ವಾಸಪ್ತತಿ ಸºಸ್ರ | ನಾಡಿ

ತತ್ರಸ್ಥ ರೂಪ ಸಮೀರ | ಅವನ

ವಿಂಶತಿ ಮೇಲೇಳು ನೂರು | ಪ್ರತಿಮ

ನೀ ಸ್ಥಾಪಿಸದಿಯೋ ಹೇ ಧೀರ | ಅಹ

ಈ ಸಮಸ್ತ ಹನುಮರೂಪ ಒಂದೊಂದರೊಳ್

ಶತರೂಪ ಸ್ಮರಣೀಯ ಶ್ರೀಶ ಸಾಸಿರ ನಾಮ 4


ಸಾತ್ಯವತೀಯ ವೇದಾರ್ಥ | ಅರಿತು

ಮಧ್ಯಗೇಹನು ವಿವರಿಸಿದ | ಆಗ

ಜಯರಾಯ ತತ್ ಟೀಕೆ ಬರೆದ | ಈಗ

ವ್ಯಾಸರಾಯನು ವಿವರಿಸಿದ | ಅಹ

ಮಿಥ್ಯಾ ತತ್ವವ ಪೇಳ್ದ ಮಾಯ್‍ಗಳ ಬಾಯ್ ಮುಚ್ಚಿ

ನಿತ್ಯ ಸುಖವನೀವ ತತ್ವ ಬೋಧಿಸಿದಿ 5

ಮಾರ್ತಾಂಡ ಕತ್ತಲೆ ಕಳೆವ | ತರ್ಕ

ತಾಂಡವ ದುಸ್ತರ್ಕ ತರಿವ | ಬಂಡು

ಮಿಥ್ಯಾವಾದಿಗಳ ದುರ್ಮತವ | ತುಂಡು

ತುಂಡುಮಾಡಿದ ನ್ಯಾಯಾಮೃತವ | ಅಹ

ಕೊಂಡಾಡಳಲವೇ ಚಂದ್ರಿಕಾ ಈವ ಆಹ್ಲಾದವ

ಬ್ರಹ್ಮಾಂqದೊಡೆಯನ ಅಮೃತ ಪ್ರಸಾದವ 6

ಪ್ರಣವ ಮಂತ್ರದಿ ಲಕ್ಷ್ಮೀರಮಣ | ಎಂಟು

ವರ್ಣ ಮಂತ್ರದಿ ಶ್ರೀರಮಣ | ವಿಷ್ಣು

ಷಡ್ವರ್ಣದಲ್ಲಿ ಸತ್ಯಾರಮಣ ಹಾಗೂ

ವರ್ಣ ಸರ್ವದಿ ರಮಾ ರಮಣ | ಅಹ

ಧ್ವನಿ ವರ್ಣ ಪ್ರತಿಪಾದ್ಯ ಸತ್ತಾದಿ ದಾತ

ಅನುತ್ತಮ ಹರಿ ರೂಪ ಗುಣ ಕ್ರಿಯಾ ಹಾಡಿದಿ 7

ಭೂಪನ ಹರಿಯಾಸನವ ನೀ ಏರ್ದಿ | ಏರಿ

ನೃಪವರನಪಮೃತ್ಯು ತರಿದಿ | ಯತಿ

ತಪಸ್ವಿಗಳಿಗೆ ಪಾಠ ಪೇಳ್ದಿ | ಸರ್ವ

ವಿಭುದರಿಂದಲಿ ಪೂಜ್ಯನಾದಿ | ಅಹ |

ಗೋಪಾಲ ಅಸುಪಾಲನ್ನೊಲುಮೆ ನಿನ್ನಲ್ಲೆಷ್ಟೋ

ಶ್ರೀಪನ ದಾಸವೃಂದಬ್ಜ ಕೂಟಕೆ ಸೂರ್ಯ 8

ನರಸಿಂಹ ಗೋಪಾಲ ಕೃಷ್ಣ | ಯಜ್ಞ

ವರಾಹ ಪಟ್ಟಾಭಿರಾಮನ್ನ | ಬಹು

ಪರಾಶರ್ಯಾದಿ ರೂಪನ್ನ | ನಿತ್ಯ

ನಿರುತ ಸಂಪೂಜಿಪ ಘನ್ನ | ಅಹ

ವರಭಕ್ತಾಗ್ರಣಿ ನೀನು ಸರಸಿಜಾಸನ ಪಿತ

'ಪ್ರಸನ್ನ ಶ್ರೀನಿವಾಸ' ನ್ನೊಲಿಸೋ ಎನಗೆ ಜೀಯ 9 ಪ

|| ಸಂಪೂರ್ಣಂ ||

***


ಪಾಲಿಸೋ ಯತಿರಾಜ ಪಾಲಿಸೋಪಾಲಿಸೋ ಮುನಿ ವ್ಯಾಸ ರಾಜ | ಜಗ -ತ್ತಲ್ಲಿ ನಿನ್ಮಹಿಮೆ ಸುಭ್ರಾಜ | ಅಹ |ಕಾಲಲ್ಲಿ ಶರಣಾದೆ ಶ್ರೀಲೋಲಪ್ರಿಯ ನಿನ್ನಆಳೆಂದು ಗಣಿಸಿ ಪಾಲಿಪುದೆನ್ನ ಪ್ರತಿಕ್ಷಣ | ಪಾಲಿಸೋ | ಪ

ದಿನಪ ಸುತೇಜ ಬ್ರಹ್ಮಣ್ಯ | ತೀರ್ಥಮುನಿಸಾರ್ವಭೌಮರ ದಿವ್ಯ |ಚಾರುವನರುಹಕರದಿಂದ ಉದಯ | ಇನ್ನುಏನೆಂಬೆ ನಿನ್ನ ಪ್ರಾಬಲ್ಯ | ಅಹ |ದೀನ ವತ್ಸಲ ನಿನ್ನ ಶರಣು ಹೊಕ್ಕೆನು ನಾನುಎನ್ನ ಭಾಗ್ಯೋದಯ ತವ ಕಾರುಣ್ಯದಿ ಇನ್ನು 1

ಕರುಣಿ ಸುಶಾಂತ ಸುವರ್ಣ | ವರ್ಣತೀರುಥಕರ ಕಂಜೋತ್ಪನ್ನ | ಸುಸ್ಥಿರ ವರಭಕ್ತಿವಿಜ್ಞಾನ| ಸಂ-ಪನ್ನ ಶ್ರೀ ಪಾದಾರ್ಯರನ್ನ | ಅಹ |ಸೇರಿ ಸೇವಿಸಿ ವಾದಿಕರಿಪಂಚಾನನಾದಸೂರಿಸಜ್ಜನನುತ ವ್ಯಾಸ ಮುನೀಂದ್ರ2

ಮಾಲೋಲ ಕೃಷ್ಣಸುಪ್ರಿಯರು |ನಿತ್ಯಕಾಳೀಶ ನಿಮ್ಮೋಳ್ ಪ್ರಚುರರು | ಮತ್ತುವ್ಯಾಳೇಶ ಅಂಶ ಸಂಯುತರು | ಎಂದುಹೇಳೋರು ಹೀಗೆ ವಿಬುಧರು | ಅಹ |ಕೀಳುವಿಷಯದಿ ಎನ್ ಮನ ಸೋಲದೇ ಹೊರಒಳಗಿಪ್ಪ ಹರಿರೂಪ ವ್ಯಾಳೆ ವ್ಯಾಳೆಗೆ ತೋರು 3

ದ್ವಾಸಪ್ತತಿ ಸºಸ್ರ | ನಾಡಿತತ್ರಸ್ಥರೂಪಸಮೀರ| ಅವನವಿಂಶತಿ ಮೇಲೇಳು ನೂರು | ಪ್ರತಿಮನೀ ಸ್ಥಾಪಿಸದಿಯೋ ಹೇ ಧೀರ | ಅಹಈ ಸಮಸ್ತ ಹನುಮರೂಪ ಒಂದೊಂದರೊಳ್ಶತರೂಪ ಸ್ಮರಣೀಯ ಶ್ರೀಶ ಸಾಸಿರ ನಾಮ 4

ಸಾತ್ಯವತೀಯ ವೇದಾರ್ಥ | ಅರಿತುಮಧ್ಯಗೇಹನು ವಿವರಿಸಿದ | ಆಗಜಯರಾಯ ತತ್ ಟೀಕೆ ಬರೆದ | ಈಗವ್ಯಾಸರಾಯನು ವಿವರಿಸಿದ | ಅಹಮಿಥ್ಯಾ ತತ್ವವ ಪೇಳ್ದ ಮಾಯ್‍ಗಳ ಬಾಯ್ ಮುಚ್ಚಿನಿತ್ಯಸುಖವನೀವ ತತ್ವ ಬೋಧಿಸಿದಿ5

ಮಾರ್ತಾಂಡಕತ್ತಲೆ ಕಳೆವ | ತರ್ಕತಾಂಡವ ದುಸ್ತರ್ಕ ತರಿವ |ಬಂಡುಮಿಥ್ಯಾವಾದಿಗಳ ದುರ್ಮತವ | ತುಂಡುತುಂಡುಮಾಡಿದ ನ್ಯಾಯಾಮೃತವ | ಅಹಕೊಂಡಾಡಳಲವೇ ಚಂದ್ರಿಕಾಈವಆಹ್ಲಾದವಬ್ರಹ್ಮಾಂqದೊಡೆಯನ ಅಮೃತ ಪ್ರಸಾದವ 6

ಪ್ರಣವಮಂತ್ರದಿ ಲಕ್ಷ್ಮೀರಮಣ | ಎಂಟುವರ್ಣ ಮಂತ್ರದಿ ಶ್ರೀರಮಣ | ವಿಷ್ಣುಷಡ್ವರ್ಣದಲ್ಲಿ ಸತ್ಯಾರಮಣ ಹಾಗೂವರ್ಣ ಸರ್ವದಿ ರಮಾ ರಮಣ | ಅಹಧ್ವನಿ ವರ್ಣ ಪ್ರತಿಪಾದ್ಯ ಸತ್ತಾದಿದಾತಅನುತ್ತಮಹರಿರೂಪಗುಣಕ್ರಿಯಾ ಹಾಡಿದಿ7

ಭೂಪನ ಹರಿಯಾಸನವ ನೀ ಏರ್ದಿ | ಏರಿನೃಪವರನಪಮೃತ್ಯು ತರಿದಿ | ಯತಿತಪಸ್ವಿಗಳಿಗೆ ಪಾಠ ಪೇಳ್ದಿ | ಸರ್ವವಿಭುದರಿಂದಲಿ ಪೂಜ್ಯನಾದಿ | ಅಹ |ಗೋಪಾಲ ಅಸುಪಾಲನ್ನೊಲುಮೆ ನಿನ್ನಲ್ಲೆಷ್ಟೋಶ್ರೀಪನ ದಾಸವೃಂದಬ್ಜ ಕೂಟಕೆ ಸೂರ್ಯ 8

ನರಸಿಂಹ ಗೋಪಾಲ ಕೃಷ್ಣ | ಯಜÕವರಾಹಪಟ್ಟಾಭಿರಾಮನ್ನ | ಬಹುಪರಾಶರ್ಯಾದಿ ರೂಪನ್ನ |ನಿತ್ಯನಿರುತ ಸಂಪೂಜಿಪ ಘನ್ನ | ಅಹವರಭಕ್ತಾಗ್ರಣಿ ನೀನು ಸರಸಿಜಾಸನ ಪಿತ'ಪ್ರಸನ್ನ ಶ್ರೀನಿವಾಸ' ನ್ನೊಲಿಸೋ ಎನಗೆಜೀಯ9 ಪ|| ಸಂಪೂರ್ಣಂ ||
*******