Showing posts with label ಬಂದೆನ್ನ ಮನಮಂದಿರದಲಿ ನಿಲ್ಲೊ ಹೇ ಶ್ರೀನಿವಾಸ gopalakrishna vittala. Show all posts
Showing posts with label ಬಂದೆನ್ನ ಮನಮಂದಿರದಲಿ ನಿಲ್ಲೊ ಹೇ ಶ್ರೀನಿವಾಸ gopalakrishna vittala. Show all posts

Monday 2 August 2021

ಬಂದೆನ್ನ ಮನಮಂದಿರದಲಿ ನಿಲ್ಲೊ ಹೇ ಶ್ರೀನಿವಾಸ ankita gopalakrishna vittala

ಬಂದೆನ್ನ ಮನಮಂದಿರದಲಿ ನಿಲ್ಲೊ | ಹೇ ಶ್ರೀನಿವಾಸ

ಬಂದೆನ್ನ ಮನಮಂದಿರದಲಿ ನಿಲ್ಲೊ ಪ.


ಇಂದಿರೇಶ ವೈಕುಂಠದಿಂದ ನೀ

ಬಂದು ಈಗ ಎನ್ನ ಹೃದಯ ಕಮಲದಿ ಅ.ಪ.


ಜಗದಂತರಾತ್ಮ ನಿರ್ಮಲಾತ್ಮ | ನಿರ್ಗತ ದುರಿತಾತ್ಮ

ನಿಗಮಾದಿಗಳೊಂದ್ಯ ನೀ ನಿತ್ಯಾತ್ಮ | ಜೀವಂತರಾತ್ಮ

ಸುಗುಣವಂತ ನಿನ್ನ ಬಗೆ ಬಗೆ ಮಹಿಮೆಯ

ಪೊಗಳಬಲ್ಲೆನೆ ನಾ ಖಗವಾಹನನೆ 1

ಅರಿಯೇನೋ ಅನ್ಯರ ಹರಿ ಸರ್ವೇಶ | ಹೃತ್ಕಮಲದಿ ವಾಸ

ಪರಿಹಾರಗೈಸೊ ಈ ಭವಕ್ಲೇಶ | ನಂಬಿದೆ ಸರ್ವೇಶ

ಅರಘಳಿಗೆ ನಿನ್ನಗಲಿರಲಾರೆನೊ

ಸಿರಿಸಹಿತದಿ ನಿನ್ನರಮನೆಯಿಂದಲಿ 2

ಅರುಹಿದರೆನಗೆ ಶ್ರೀ ಗುರುಗಳು ಇಂದು | ನೀ ರಕ್ಷಕನೆಂದು

ಕರಕರೆಗೊಳಿಪುದು ಧರ್ಮವೆ ನಿಂದು | ನೀ ಕಾಯಲಿಬೇಕಿಂದು

ಸರಿಯಲ್ಲವು ಈ ತೆರದಲಿ ತೊರೆವುದು

ಶರಣ ರಕ್ಷಕನೆಂಬೊ ಬಿರುದು ಪೊತ್ತಿಲ್ಲವೆ 3

ಎಂತೆಂತು ಸಹಿಸಲಿ ಈ ಭವಕ್ಲೇಶ | ಜೀವಾಂತರವಾಸ

ಕಂತುಪಿತ ಎಣಿಪರೆÀ ಎನ್ನಯ ದೋಷ | ಸರಿಯಲ್ಲ ಸುರೇಶ

ಇಂತು ನಿನಗೆ ಒಪ್ಪಿಸಿದರೊ ಗುರುಗಳು

ಚಿಂತಿತಾರ್ಥ ನಿನಗೆನ್ನ ತರ ತಿಳಿಯದೆ 4

ಬೆಟ್ಟದ ಒಡೆಯ ಬೇಗನೆ ಬಾರೊ | ಹೃತ್ಕಮಲದಿ ತೋರೊ

ಶ್ರೇಷ್ಠ ಶ್ರೀ ಗುರುಗಳ ಕರುಣವ ಬೀರೊ | ಸಲಹುವರಿನ್ಯಾರೊ

ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಪದಂಗಳ

ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನೆ 5

****