Showing posts with label ಬಲುಕಷ್ಟ ಬರಗಾಲ ಬಂದಿತಯ್ಯ ಕೊಲುವ ವೈರಿ ಜನಕೆ ಬರಬಾರದಯ್ಯ shyamasundara. Show all posts
Showing posts with label ಬಲುಕಷ್ಟ ಬರಗಾಲ ಬಂದಿತಯ್ಯ ಕೊಲುವ ವೈರಿ ಜನಕೆ ಬರಬಾರದಯ್ಯ shyamasundara. Show all posts

Wednesday 1 September 2021

ಬಲುಕಷ್ಟ ಬರಗಾಲ ಬಂದಿತಯ್ಯ ಕೊಲುವ ವೈರಿ ಜನಕೆ ಬರಬಾರದಯ್ಯ ankita shyamasundara

 ..

ಬಲುಕಷ್ಟ ಬರಗಾಲ ಬಂದಿತಯ್ಯ

ಕೊಲುವ ವೈರಿ ಜನಕೆ ಬರಬಾರದಯ್ಯ ಪ


ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ

ಉಸರಲು ಬಾಯಿಲ್ಲ ವೃದ್ಧ ಜನಕೇ

ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ

ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1


ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ

ಪ್ರವಾಹದಂದದಿ ವೃಧ್ಧಿಯಾಗುತಲಿಹುದು

ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ

ಶಿವಶಿವಾಯೆಂದು ಭವಣಿಯನನುಭವಿಸುವರು 2


ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ

ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ

ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ

ಮರಮರನೆ ಮನದೊಳಗೆ ಮರುಗುವರು ಬಡಜನರೂ 3


ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ

ತಾಳಿ ಮನದಲಿ ವ್ಯಥಿಯ ಕೂಲಿ ಜನರು

ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ

ಕೂಲಿವಲ್ಲೆವು ಎನುತ ಗೋಳಿಡುತಲಿಹರು 4


ಕಡಲೆ ಕಾಣದ ಹರಿಯು | ಕಡಲೊಳಡಗಿದ

ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ

ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ

ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5


ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ

ಬಳುತಿಹವು ಬಡಜನರ ಕಣ್ಣಿಂದ ನೀರು

ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6


ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು

ನಮ್ಮ ಸಕಲ ಜನಕೇ |

ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ

ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7

***