Showing posts with label ಬಾಗಿಲಿಕ್ಕಿದ ಬಗಿಯೇನೆ ಬೇಗ ಬ್ಯಾಗದಿಂದ ಪೇಳೆ ನೀನೆ narasimhavittala. Show all posts
Showing posts with label ಬಾಗಿಲಿಕ್ಕಿದ ಬಗಿಯೇನೆ ಬೇಗ ಬ್ಯಾಗದಿಂದ ಪೇಳೆ ನೀನೆ narasimhavittala. Show all posts

Tuesday 3 August 2021

ಬಾಗಿಲಿಕ್ಕಿದ ಬಗಿಯೇನೆ ಬೇಗ ಬ್ಯಾಗದಿಂದ ಪೇಳೆ ನೀನೆ ankita narasimhavittala

 'ನರಸಿಂಹವಿಠಲ' ಅಂಕಿತ by ಓರಬಾಯಿ ಲಕ್ಷ್ಮೀದೇವಮ್ಮ ಸೊಂಡೂರು 1865+ 


ಕಥನಾತ್ಮಕ 

ಬಾಗಿಲಿಕ್ಕಿದ ಬಗಿಯೇನೆ | ಬೇಗ ಬ್ಯಾಗದಿಂದ ಪೇಳೆ ನೀನೆ |

ನಾಗವೇಣಿಯೆನ್ನ ಕೂಡ ಜಾಗುಬ್ಯಾಡ ಬಾಗಿಲುತೆಗೆಯೆ ಪ


(ಬಂದೆಯಾದರಿಂದಿನದಿನದಿ) | ಛಂದದಿಂದ ಪೇಳೊ ಮದದಿ

ಬಂದದೇನು ಗಾಡಾಧಕಾರದಿ | ನಿಂದು

ನಾಮವುಸಾರೊ ಮುದದಿ 1

ಅಚ್ಯುತಾನ ಇಚ್ಛೆಯಿಂದ | ಸ್ವೇಚ್ಛ ದೈತ್ಯರಾಳಿದೇನೆ

ಮತ್ಸ್ಯರೂಪಗೈದುನಾನೆ | ಭೀಭತ್ಸು ರಾಯ ನಲ್ಲವೇನೆ 2

ಯೇಸು ಪೇಳಿದ್ರಿಗುಣವನ್ನು | ಈಸು ಮಂದಿಯೊಳು ನೀನು

ಬೂಸುರಾಗೆ ಭಾಷೆಕೊಟ್ಟು | ಕೂಸೀನ ಕೊಡದಾವ ನೀನು 3

ಪಾರ್ವತಿಯ ಪತಿಯನೊಲಿಸಿ | ಪಾಶು ಪತಾಸ್ತ್ರವ ಗೆಲಿಸಿ

ಪರಮ ಕೂರ್ಮಗೆ ಪಾದಸೇವಕ |

ಪಾರ್ಥರಾಯನೆ ಪಾಂಚಾಲಿ 4

ಪಾರ್ಥರಾಯ ನೀನಾದರೇನು, ಕೀರ್ತಿಯೆಲ್ಲಾ ಬಲ್ಲೆನಾನು

ಸ್ತೋತ್ರ ಮೂರುತಿ ತಂಗಿಗೀಗ | ತೀರ್ಥಯಾತ್ರೆಲಿ ಗೆಲಿಹೋಗೊ 5

ಫುಂಡತೊರೆವ ಗಂಡನಾನೆ | ಖಾಂಡವನ ದಹಿಸಿದೆನೆ

ಗಂಡುಗಲಿ ವರಹನ ದಾಸಾ | ಗಾಂಡೀವರ್ಜುನ ನಲ್ಲವೇನೆ 6

ಧೀರ ನೀನಾದರೆ ಏನು ಭಾರಿ ಗುಣವೆಲ್ಲಾ ಬಲ್ಲೆನಾನು

ದ್ವಾರಾವತಿಯಲ್ಲಿ ದೊರೆತನದಲ್ಲಿ ಧೀರ

ಯತಿಯಾಗಿರು ಹೋಗೋ 7

ಕೋಟಿರಾಯಗೆ ಮೇಟಿ ನಾನು | ಮಾಟವಾದ ಮುಖದವನು|

ವಟುರೂಪನ್ನ ವಲಿಸಿದೆನೆ ಕಿರೀಟಿ ಅಲ್ಲವೆ ಕೃಷ್ಣಿನಾನೆ 8

ಕೋಟಿರಾಯಗೆ ಮೇಟಿ ನೀನು | ಮಾಟವಾದ ಮುಖದವನು |

ಬೂಟಿತನದಿ ವಿರಾಟನಲ್ಲಿ | ಆಟವಾ ಕಲಿ ಸ್ಹೋಗೊ ನೀನು 9

ಘಾತುಕ ಕರ್ಮಗಳನ | ಖ್ಯಾತಿಯಿಂದ ಚೈಸಿದ್ದೇನೆ

ಮಾತೆ ಅಳಿದಗೆ ದೂತನಾನು ಶ್ವೇತವಾಹನ ದ್ರೌಪದಿನಾ 10

ಶ್ವೇತ ವಾಹನ ನೀನಾದರೇನು | ಖ್ಯಾತಿಯೆಲ್ಲ ಬಲ್ಲೆ ನಾನು

ಜೂತದಲ್ಲಿ ಸೋತವ ನೀ | ಅಗ್ನಾತವಾಸದಲ್ಲಿರು ಹೋಗೋ 11

ವಿಪಿನಾವಾಸದಿಯುದ್ಧ | ವಿಪರೀತ ಮಾಡಿದೇನೇ ಶ್ರೀ

ಪತಿ ಶ್ರೀ ರಾಮದೂತ, ಭೂಪ ವಿಜಯನಾ ವಿಮಲಾಂಗೀ 12

ಭಾಳ ಪೇಳಿದಿ ಗುಣವನ್ನು ಕೇಳಲಿಕೆ ಅಶಕ್ಯವಿನ್ನು

ಬೋಳರಾಯರೊಳ್ ಕಾಳಗವನು |

ಭಾಳ ಹರುಷದಿಗೆಲಿ ಹೋಗೋ 13

ಉಕ್ಕುವ ಯೆಣ್ಣೆಯೊಳ್ ನೋಡಿ |

ಮೀನು ಫಕ್ಕನೆ ಖಂಡಿಸಿದೆನೇ

ರುಕ್ಮಿಣಿ ಪತಿ ಶ್ಯಾಲ ನಾನು | ಹೆಚ್ಚಿನ ಸವ್ಯಸಾಚಿ ನಾನು 14

ದುಷ್ಟ ಕುರುಪಕಿಗೆ ಭಯವ ಬಿಟ್ಟು | ಶ್ರೇಷ್ಟ ಸ್ತ್ರೀ ವೇಷ ಬಿಟ್ಟು

ಅಷ್ಟು ಜನರೊಳು ಗುಟ್ಟುತೋರದೆ | ಧಿಟ್ಟದ್ವಿಜನಾಗಿ ಹೋಗೊ 15

ಯುದ್ಧದಲಿ ಪ್ರಸಿದ್ಧನಾನು | ಭದ್ದವಾಗಿ ಮಾಡುವೆನು

ಬೌದ್ದ ರೂಪಗೆ ಬಂಧು ನಾನು | ಪ್ರಸಿದ್ಧ ಕೃಷ್ಣ ನಾನಲ್ಲವೇನು 16

ಯುದ್ಧದಲ್ಲಿ ಪ್ರಸಿದ್ದನೆಂದು | ಸಿದ್ದಿಗಳನು ಹೇಳಿದಿಂದು

ಮುದ್ದು ಬಬ್ರುವಾಹನನಲ್ಲಿ | ಬಿದ್ದ ಸುದ್ದಿಯ ಪೇಳೊ ಇಲ್ಲಿ 17

ಕಂಜ ಮುಖಿಕಲಿ ಭಂಜನಾನ ಮಾಯಾ

ಪಂಜರದೊಳಿರುವೆನೆ | ಮಂಜುಳ ವಾಣಿ

ಕೇಳೆ ನಾರಾಯಣನಲ್ಲವೇನೆ 18

ವಜ್ರದಬಾಗಿಲು ತೆಗೆದು | ಅರ್ಜುನನಪ್ಪಿದಳ್ ಬಿಗಿದು

ಸೆಜ್ಜೆಯೊದೊಳು ಬಾರೆ ಎಂದು ಕರೆದು | ಮೂರ್ಜಗ

ದೊಡೆಯಗೆ ಕೈಮುಗಿದು 19

ನಿರುತವೀ ಸಂವಾದ ಪಠಿಸಲು ಭರಿತವಾದ ಸುಖವೀವೊದು

ತ್ವರಿತ ದಿಂದಲಿ ದುರಿತಕಳಿಯೋದು|ನರಸಿಂಹ

ವಿಠಲನ್ನ ನೆನೆಯೋದು 20

****