Showing posts with label ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ vijaya vittala. Show all posts
Showing posts with label ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ vijaya vittala. Show all posts

Thursday 17 October 2019

ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ankita vijaya vittala

ವಿಜಯದಾಸ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ
ಕುಜನರೊಳಾಡದಲೆ ನಿಜ ಭಕುತಿಯಿಂದ
ಭುಜಬಲವುಳ್ಳ ಪರಜರಟ್ಟುವ ದಿ
ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ
ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ
ಕರಯುಗಳ ಮುಗಿದು ಶಿರವಾನಿಲ್ಲದೆ
ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ
ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ
ಪರಿಹರವೊ ಬಂದರಘಳಿಗೆಯಲಿ
ದುರುಳರಿಗಾಯ್ತು ಮರಿಯದೆ ಚೆನ್ನಾಗಿ1

ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ
ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ
ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು
ಸುರರು ಮೆಚ್ಚುತಲಿರೆ
ಮುರರಿಪು ಚತುರ್ದಶ ಧರಣಿಗೆ ಪರನೆಂದು
ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ
ಕೊಡುವ ಯತಿಶಿರೋಮಣಿ ಕರ್ನಾ 2

ಪಾದಾಂಬುಜಾತ ಕೃಷ್ಣಾ ತನು
ಭವಸರಿತ ನಿವಾಸಾ ದಿವಿಜೇಶನಾಯುಧ
ಕವಚದಿಂದಲಿ ತನ್ನವರನ ಪೊರೆದೆತ್ತಿ
ನವವಿಧ ಬಗೆ ತೋರಿ ತವಕದಿ ಕೋಲುಪುರ
ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು
ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ
ಶ್ರವಣ ಮನನ ಧ್ಯಾನವನು ಬಲ್ಲವರಾ3
**********