by ಪ್ರಸನ್ನವೆಂಕಟದಾಸರು
ರಾಗ - : ತಾಳ -
ಮರೆಯದಿರು ಮನವೆ ಮಾಧವನ ನಮ್ಮ
ದುರಿತ ದಾರಿದ್ರ್ಯವನು ಹರಿಸಿ ಹೊರೆವವನ ll ಪ ll
ಆಳರಿತು ಊಳಿಗವ ಕೊಂಡುಂಡು ದಣಿವಂತೆ
ಮೇಲಾಗಿ ಜೀವವನು ಕೊಡುವ ದೇವನ
ಕಾಲ ಕಾಲಕೆ ಮಾಳ್ಪ ನಡೆತಪ್ಪು ನುಡಿತಪ್ಪು
ಆಲೋಚಿಸದೆ ಕರುಣಿಸುವ ಕರುಣನ ll ೧ ll
ಮೂಢನಾಗಲಿ ಮತಿಯುಳ್ಳ ನರನಾಗಲಿ
ಪಾಡಿದಾಕ್ಷಣ ಭೃತ್ಯನೆಂದು ಒಲಿದು
ಕೂಡಿಕೊಂಬುವ ದೊರೆಗಳಿಲ್ಲ ಹರಿಯಲ್ಲದಾ
ನಾಡಾಡಿ ಬಣಗು ಕಲ್ಲುಗಳ ಬೇಡಿ ll ೨ ll
ಮುನ್ನಾರು ಅನ್ಯದೇವರ ಭಜಿಸಿ ಭವಗೆದ್ದ
ರಿನ್ನಾರು ಹರಿಯೊಲುಮೆಯಲಿ ದಣಿದರು
ನಿನ್ನ ಗುರುಗಳಿಂದರಿತು ನೆರೆನಂಬು ಪ್ರ
ಸನ್ನ ವೆಂಕಟಪತಿಯ ಪಾದವನಜವ ll ೩ ll**
ಮರೆಯದಿರು ಮನವೆ ಮಾಧವನ ನಮ್ಮದುರಿತದಾರಿದ್ರ್ರ್ಯವನು ಹರಿಸಿ ಹೊರೆವವನ ಪ.
ಆಳರಿತು ಊಳಿಗವ ಕೊಂಡುಂಡು ದಣಿವಂತೆಮೇಲಾಗಿ ಜೀವವನು ಕೊಡುವ ದೇವನಕಾಲಕಾಲಕೆ ಮಾಳ್ಪ ನಡೆತಪ್ಪು ನುಡಿತಪ್ಪುಆಲೋಚಿಸದೆ ಕರುಣಿಸುವ ಕರುಣನ 1
ಮೂಢನಾಗಲಿ ಮತಿಯುಳ್ಳ ನರನಾಗಲಿಪಾಡಿದಾಕ್ಷಣ ಭೃತ್ಯನೆಂದು ಒಲಿದುಕೂಡಿಕೊಂಬುವ ದೊರೆಗಳಿಲ್ಲ ಹರಿಯಲ್ಲದಾನಾಡಾಡಿಬಣಗುಕಲ್ಲುಗಳ ಬೇಡಿ2
ಮುನ್ನಾರು ಅನ್ಯದೇವರ ಭಜಿಸಿ ಭವಗೆದ್ದರಿನ್ನಾರು ಹರಿಯೊಲುಮೆಯಲಿ ದಣಿದರುನಿನ್ನ ಗುರುಗಳಿಂದರಿತು ನೆರೆನಂಬು ಪ್ರಸನ್ನ ವೆಂಕಟಪತಿಯ ಪಾದವನಜವ 3
*******
ಆಳರಿತು ಊಳಿಗವ ಕೊಂಡುಂಡು ದಣಿವಂತೆಮೇಲಾಗಿ ಜೀವವನು ಕೊಡುವ ದೇವನಕಾಲಕಾಲಕೆ ಮಾಳ್ಪ ನಡೆತಪ್ಪು ನುಡಿತಪ್ಪುಆಲೋಚಿಸದೆ ಕರುಣಿಸುವ ಕರುಣನ 1
ಮೂಢನಾಗಲಿ ಮತಿಯುಳ್ಳ ನರನಾಗಲಿಪಾಡಿದಾಕ್ಷಣ ಭೃತ್ಯನೆಂದು ಒಲಿದುಕೂಡಿಕೊಂಬುವ ದೊರೆಗಳಿಲ್ಲ ಹರಿಯಲ್ಲದಾನಾಡಾಡಿಬಣಗುಕಲ್ಲುಗಳ ಬೇಡಿ2
ಮುನ್ನಾರು ಅನ್ಯದೇವರ ಭಜಿಸಿ ಭವಗೆದ್ದರಿನ್ನಾರು ಹರಿಯೊಲುಮೆಯಲಿ ದಣಿದರುನಿನ್ನ ಗುರುಗಳಿಂದರಿತು ನೆರೆನಂಬು ಪ್ರಸನ್ನ ವೆಂಕಟಪತಿಯ ಪಾದವನಜವ 3
*******