Showing posts with label ಮಾಡಬೇಕೆಲೋ ಭಜನೆ ಮಾಡಬೇಕೆಲೊ tulasiramadasa. Show all posts
Showing posts with label ಮಾಡಬೇಕೆಲೋ ಭಜನೆ ಮಾಡಬೇಕೆಲೊ tulasiramadasa. Show all posts

Sunday 5 September 2021

ಮಾಡಬೇಕೆಲೋ ಭಜನೆ ಮಾಡಬೇಕೆಲೊ ankita tulasiramadasa

 ಚನ್ನಪಟ್ಟಣದ ಅಹೋಬಲದಾಸರು


ಮಾಡಬೇಕೆಲೋ ಭಜನೆ ಮಾಡಬೇಕೆಲೊ ಪ 


ಮಾಡಬೇಕು ಭಜನೆ ಮನದಿ ಕೂಡಬೇಕು ಪ್ರಣವ ಘನದೀ ಈಡ ಪಿಂಗಳ ಯಿದರೊಳಗಿರುವ ನಾಡಿ ಭೇದಗಳನು ತಿಳಿದೂ 1 

ಆರು ಮೂರುಯೆಂಬೊ ದಾರಿ ಮೀರಿನೋಡುಯಿರುವ ಶಿಖರ ತೋರಿಯಾಡುವಂಥಾ ಘಂಟೆ ಭೇರಿನಾದಗಳನು ತಿಳಿದೂ 2 

ವರದ ರಂಗನಿರುವನರಿಯೊ ಧರಣಿ ಕನಕಪುರಿಯ ಕೋಟೆ ಗುರುವು ತುಲಶೀರಾಮದಾಸ ರರಿತುಯಿತ್ತ ಚರಣ ಭಜನೆ 3

****