Showing posts with label ಮಾರುತ ಒಲಿದವಗೆ ಮಾರಮಣನು ಒಲಿವಾ mohana vittala. Show all posts
Showing posts with label ಮಾರುತ ಒಲಿದವಗೆ ಮಾರಮಣನು ಒಲಿವಾ mohana vittala. Show all posts

Sunday 1 August 2021

ಮಾರುತ ಒಲಿದವಗೆ ಮಾರಮಣನು ಒಲಿವಾ ankita mohana vittala

 ..

ಮಾರುತ ಒಲಿದವಗೆ ಮಾರಮಣನು ಒಲಿವಾ ಪ


ಭಾರತೀರಮಣ ಮುನಿಯೆ ಭವಹರ ಹರಿ ಮುನಿವ ಅ.ಪ.


ಸುಗ್ರೀವನು ಬಂದು ಹನುಮನ್ನ ಅನುಸರಿಸೆಶೀಘ್ರದಿಂದ ಹರಿ ವಾಲಿಯ ಕೊಂದನು ||ವಿಗ್ರಹದೊಳಗೆ ಕರ್ಣನ ಗೆದ್ದ ಅರ್ಜುನನುಅಗ್ರಜನ ಕೃಪೆ ಇದ್ದ ಕಾರಣಾ1

ಹನುಮಗ್ಹರಿ ಒಲಿಯಲು ರಾವಣನ ಒಂದುಕ್ಷಣದೊಳಗೆ ಹರಿ ಖಂಡಿಸಿದನು ||ಅನುಮಾನವಿಲ್ಲದೆ ಅವನನುಜ ವಿಭೀಷಣಗೆಘನ ಪದವಿಯನಿತ್ತ ಹನುಮ ಬೋಧಿತ ಹರಿ2

ತುಂಗಾ ತೀರ ನಿವಾಸ ಶೃಂಗಾರ ಗುಣಾಂಬುಧೇಹಿಂಗದೇ ಭಕುತರ ಪೊರೆವ ದಾತ ||ಮಂಗಳ ಮಹಿಮ ಮೋಹನ್ನ ವಿಠ್ಠಲನ್ನ ಪಾ-ದಂಗಳ ಭಜಿಸುವ ಮುನಿವರ್ಯ ದಾತ 3

***