Showing posts with label ಮುತ್ತೈದೆಯಾದೆ ನಾ ಮುರವೈರಿ ದಯದಿ gopalakrishna vittala. Show all posts
Showing posts with label ಮುತ್ತೈದೆಯಾದೆ ನಾ ಮುರವೈರಿ ದಯದಿ gopalakrishna vittala. Show all posts

Monday 2 August 2021

ಮುತ್ತೈದೆಯಾದೆ ನಾ ಮುರವೈರಿ ದಯದಿ ankita gopalakrishna vittala

ಮುತ್ತೈದೆಯಾದೆ ನಾ ಮುರವೈರಿ ದಯದಿ

ನಿತ್ಯತೃಪ್ತನು ಎನ್ನ ನಿಜಕರವ ಪಿಡಿಯೆ ಪ.


ಗುರುಗಳುಪದೇಶಾಂಬುಧಿಯಲಿ ಪುಟ್ಟಿದ ಎನ್ನ

ಕರೆದರು ಕಮಲಾಭಿದಾನದಿಂದ

ವರುಷವೆಂಟಾಗೆ ಗುರುಜನಕ ಎನ್ನನುದಯದಿ

ಸಿರಿವರನೆ ಪೊರೆ ಎಂದು ಒಪ್ಪಸಿದ ಕತದಿಂ1

ಗುರು ಕೊಟ್ಟ ಅಂಕಿತವೆ ಮಾಂಗಲ್ಯವಾಯ್ತೆನಗೆ

ಗುರುವಿಟ್ಟ ನಾಮವೆ ತಿಲುಕವಾಯ್ತು

ಗುರುಕರುಣವೆಂಬ ಕವಚವ ತೊಟ್ಟೆ ಹರುಷದಲಿ

ಗುರು ಪ್ರೀತಿ ಎಂಬ ವಸನವನುಟ್ಟು ಮುದದಿ 2

ಗುರುವು ಬೋಧಿಸಿದ ಭಕ್ತಿ e್ಞÁನ ವೈರಾಗ್ಯ

ಸರಿ ಮಾಡಿ ಮೂರು ಕಾಲಿನ ಜಡೆಯನು

ಪರಿಪರಿಯ ತತ್ವಗಳೆ ಚೌರಿ ರಾಗುಟಿ ಗೊಂಡ್ಯ

ಗುರುವಾಜ್ಞೆ ಎಂಬ ಪುಷ್ಪವ ಧರಿಸಿ ಶಿರದಿ3

ಗುರುವಾಕ್ಯ ಶ್ರವಣವೇ ಕರ್ಣಕುಂಡಲವಾಯ್ತು

ಗುರುವಿನ ನಿರ್ಮಾಲ್ಯವೇ ನಾಸಿಕಾಭರಣ

ಗುರುನಾಮಗಳೆ ರತ್ನ ಪರಿಪರಿಯ ಹಾರಗಳು

ಗುರುಭಕ್ತಿ ಎಂಬ ನಡು ಒಡ್ಯಾಣ ಧರಿಸಿ 4

ಗುರುವು ಪೇಳಿದ ಸದ್ಗುಣಗಳೆ ಪಾದಾಭರಣ

ಗುರುವಿನ್ವಾತ್ಸಲ್ಯವೆ ಪರಿಮಳ ದ್ರವ್ಯ

ಗುರು ಅನುಗ್ರಹವೆಂಬೊ ಮಂಗಳ ದ್ರವ್ಯಗಳು

ಗುರು ಮಾತೆ ಎನ್ನ ಪೋಷಿಸಿ ಹರಿಗೆ ಕೊಡಲು 5

ಹೃದಯವೆ ಲಗ್ನ ಮಂಟಪ ದಿವ್ಯ ಶೃಂಗಾರ

ಪದುಮಭವ ಸುರರೆ ನೆರದಿಹ ಬಂಧು ಬಳಗ

ಒದಗಿ ಬಹ ಸುe್ಞÁನ ಸಂಬಾರ ಸಲಕರಣೆ

ಮದನ ಪಿತನೆದುರಿಗೆ ನಿಲಿಸಿ ಧಾರೆಯನೆರೆಯೆ 6

ಗುರುವೆ ಜನನಿ ಜನಕ ಗುರುವೆ ಪುರೋಹಿತರು

ಗುರುವಚನವೆಂಬ ಅಕ್ಷತೆ ಎರಚುತಿರಲು

ಪರಮ ಜೀವಚ್ಛಾದಿ ಕದ ಪರದೆ ತೆಗೆಯುತಿರೆ

ಹರಿಗೆ ಗುಣನಾಮ ಜೀರಿಗೆ ಬೆಲ್ಲ ಎರಚೆ 7

ಸುಮನೊ ವೃತ್ತಿಗಳೆಂಬ ಕಮಲದ್ಹಾರವನ್ಹಾಕಿ

ಕಮಲನಾಭನ ಪದಕೆರಗಿ ನಿಲಲೂ

ಕಮಲಹಸ್ತವ ಶಿರದ ಮೇಲಿಟ್ಟು ಶ್ರೀ ಕೃಷ್ಣ

ಕಮಲೆ ನಿನ್ನನು ಪೊರೆವೆನೆಂಬ ಅಭಯ ಕೊಡಲು 8

ಮುಕ್ತಿ ಸುಖವೆಂಬ ಮಂಗಳ ಸೂತ್ರ ಬಂಧಿಸಲು

ಮುಕ್ತರಾರಾಧ್ಯ ಲಕ್ಷ್ಮೀಕಾಂತನು

ಮುಕ್ತರಾರಾಧ್ಯ ಜಗದ್ಭರ್ತೃ ಮುನಿಜನವಂದ್ಯ

ವ್ಯಕ್ತನಾಗಲು ಮನದಿ ಗುರು ಕಟಾಕ್ಷದಲಿ 9

ಗುರು ತಿಳಿಸಿದಂಥ ಸ್ವರೂಪದರ್ಪಣ ನೋಡಿ

ಪರಮ ಸೌಭಾಗ್ಯ ಆನಂದಪಡುವೆ

ಗುರುಗಳಂತರ್ಯಾಮಿ ಗೋಪಾಲಕೃಷ್ಣವಿಠ್ಠಲ

ಗುರುಬಿಂಬನೇ ಎನಗೆ ಸುಖವ ಪಾಲಿಸಲಿ 10

****