ವಿಜಯದಾಸರ ಸ್ತೋತ್ರ
ರಾಗ - : ತಾಳ -
ವಿಜಯರಾಯರ ಪಾದಕಮಲ ಭಜಿಸಲಾಕ್ಷಣ ದಿ
ಗ್ವಿಜಯ ಮಾಡಿ ಸುಜನರನ್ನ ಪೊರೆವನನುದಿನ ll ಪ ll
ದಾಸಪ್ಪನೆಂಬ ನಾಮದಿಂದ ಕರಸುತ ಉದರ l
ಗೋಸುಗದಿ ಪರರ ಬಳಿಯ ಆಶ್ರಿಸುತ l
ಯೇಸು ಪರಿಯ ಬಡತನವು ಸೋಸಿದಣಿವುತ l
ಕ್ಲೇಶಗೊಂಡು ಸುಲಿಸಿಕೊಂಡು ಕಾಶಿಗ್ಹೋಗುತ ll 1 ll
ವಾಸವಾಗಿ ಸನ್ಯಾಸಿ ವೇಷ ಧರಿಸುತ ನಿತ್ಯ l
ಬ್ಯಾಸರದಲೆ ವ್ರತಗಳು ಉಪವಾಸ ಮಾಡುತ l
ರಾಶಿರಾಶಿ ಜನರ ಕೂಡಿ ದೇಶಚರಿಸುತ ಮ್ಯಾಲೆ l
ಕಾಶಿ ಬಿಟ್ಟು ಸೇತುರಾಮೇಶನ್ನ ಹುಡುಕುತ ll 2 ll
ತಿರುಗಿ ತಿರುಗಿ ಚೀಕಲಪರಿಗೆ ಬಂದನು ಕಂಡು l
ಗುರುತು ಹಿಡಿದು ಆಕ್ಷಣದಿ ಕರೆದು ವೈದರು l
ಪರಮ ಸಂತೋಷದಿಂದ ಭರಿತರಾದರು ಮೈ l
ನೆರೆದ ಶೋಭನಾದಿಗಳನು ತ್ವರಿತ ಮಾಡ್ದರು ll 3 ll
ನಿತ್ಯ ಸಂಸಾರದಲ್ಲಾಸಕ್ತರಾಗುತ ದೊಡ್ಡ l
ಹತ್ತುಯೆಂಟು ಗ್ರಾಮವನ್ನುವತ್ತಿ ಆಳುತ್ತಾ l
ಗುತ್ತಿಗೆಯ ಹೊತ್ತ ರೊಕ್ಕ ಮ್ಯಾಲೆ ಬೀಳಲು ಇನ್ನು l
ಎತ್ತಸೇರಲೆಂದು ಭಾಗೀರಥಿಗೆ ಹೋಗುತ ll 4 ll
ಕಾಶಿಯೊಳಗೆ ಮಲಗಿರಲು ಸ್ವಪ್ನಕಂಡರು ಪುರಂದರ l
ದಾಸರೇವೆಂಬದು ವ್ಯಾಸಕಾಶಿಗೊಯ್ದರು l
ಶ್ರೀಶನಿಂದಲಿವರಿಗೆ ಉಪದೇಶ ಕೊಡಿಸೋರು l
ವಿಜಯದಾಸರೆಂದು ಕರೆಸಿರೆನ್ನೆ ಎದ್ದು ಕುಳಿತರು ll 5 ll
ಕನಸಿನೊಳಗೆ ದೇವರ ದರುಶನಾಗುತ ಶ್ರೀ l
ಮನಸಿಜನಪಿತನ ದಯವು ಘನ ಘನಾಗುತ l
ಜಿನಸು ಜಿನಸು ಪದ ಸುಳಾದಿಗಳನು ಪೇಳುತ ಆಗ l
ನೆನಿಸಿದಾಕ್ಷಣದಲಿ ಮುಖದಿ ಕವಿತೆ ಹೊರಡುತಾ ll 6 ll
ಮತ್ತೆ ಹೊರಟು ಆದವಾನಿ ಸ್ಥಳಕೆ ಬಂದರು l
ಯೇನು ಹತ್ತು ಜನರಿಗೆ ಹೇಳಿದ ವಾಕ್ಯಸತ್ಯವೆಂದರು l
ಸುತ್ತುಮುತ್ತು ನೂರಾರು ದಾಸರು ನೆರೆದರು ಆನಿ l
ಸತ್ತಿಗಿ ಪಲ್ಲಕ್ಕಿಯವರೆ ಶಿಷ್ಯರಾದರು ll 7 ll
ಯಾತ್ರಿ ತೀರ್ಥಗಳನು ಬಹಳ ಚರಿಸಿ ನೋಡುತ ಸ l
ತ್ಪಾತ್ರರಲ್ಲಿ ನೋಡಿ ಧರ್ಮಗಳನೆ ಮಾಡುತ l
ರಾತ್ರಿ ಹಗಲು ವಿಜಯವಿಟ್ಠಲನೆಂದು ಪಾಡುತ l
ಜನರ ಶ್ರೋತ್ರಿಂದ್ರಿಯಗಳ ಉದ್ಧಾರ ಮಾಡುತ ll 8 ll
ಪೂರ್ತಿ ಜ್ಞಾನದಿಂದ ಕರ್ಮವೆಲ್ಲ ಕಡಿದರು l ಸ l
ತ್ಕೀರ್ತಿವಂತರಾಗಿ ಬಹಳ ಖ್ಯಾತಿ ಪಡೆದರು l
ಕಾರ್ತಿಕ ಶುದ್ಧ ದಶಮಿ ದಿವಸ ನಡೆದರು l
ಶ್ರೀ ಸತ್ಯರಮಣ ಕೇಶವವಿಠಲನ್ನ ಕಂಡರು ll 9 ll
***
ವಿಜಯರಾಯರ ಪಾದಕಮಲ ಭಜಿಸಲಾಕ್ಷಣ ದಿ- |ಗ್ವಿಜಯ ಮಾಡಿ ಸುಜನರನ್ನು ಪೊರೆವನನುದಿನ ಪ
ದಾಸಪ್ಪನೆಂಬ ನಾಮದಿಂದ ಕರೆಸುತ ಉದರ ಗೋಸುಗದಿ ಪರರ ಬಳಿಯ ಆಶ್ರಿಸುತ ||ಯೇಸುಪರಿಯ ಬಡತನವು ಸೋಸಿ ದಣಿವುತ |ಕ್ಲೇಶಗೊಂಡು ಸುಲಿಸಿಕೊಂಡು ಕಾಶಿಗ್ಹೋಗುತ 1
ವಾಸವಾಗಿ ಸನ್ಯಾಸಿ ವೇಷ ಧರಿಸುತ ನಿತ್ಯ ಬ್ಯಾಸರದಲೆ ವ್ರತಗಳು ಉಪವಾಸ ಮಾಡುತ ||ರಾಶಿ ರಾಶಿ ಜನರ ಕೂಡಿ ದೇಶ ಚರಿಸುತ ಮ್ಯಾಲೆಕಾಶಿ ಬಿಟ್ಟು ಸೇತು ರಾಮೇಶನ್ನ ಹುಡುಕುತ 2
ತಿರುಗಿ ತಿರುಗಿ ಚೀಕಲಾಪರಿಗೆ ಬಂದನು ಕಂಡುಗುರುತು ಹಿಡಿದು ಆ ಕ್ಷಣದಿ ಕರೆದು ವೈದ್ಯರು ||ಪರಮ ಸಂತೋಷದಿಂದ ಭರಿತರಾದರು ಮೈನೆರೆದ ಶೋಭನಾದಿಗಳನು ತ್ವರಿತ ಮಾಡ್ದರು 3
ನಿತ್ಯ ಸಂಸಾರದಲ್ಲಾಸಕ್ತರಾಗುತ ದೊಡ್ಡ ಹತ್ತು ಎಂಟು ಗ್ರಾಮವನ್ನು ವತ್ತಿ ಆಳುತಾ ||ಗುತ್ತಿಗೆಯ ಹೊತ್ತ ರೊಕ್ಕ ಮ್ಯಾಲೆ ಬೀಳುತ ಯಿನ್ನುಎತ್ತ ಸೇರಲೆಂದು ಭಾಗೀರಥಿಗೆ ಹೋಗುತ 4
ಕಾಶಿಯೊಳಗೆ ಮಲಗಿರಲು ಸ್ವಪ್ನ ಕಂಡರು ಪುರಂದರ-ದಾಸರೇವೆಂಬುದು ವ್ಯಾಸ ಕಾಶಿಗೊಯ್ದರು ||ಶ್ರೀಶನಿಂದಲಿವರಿಗೆ ಉಪದೇಶ ಕೊಡಿಸೋರು ವಿಜಯ ದಾಸರೆಂದು ಕರೆಸಿರೆನ್ನೆ ಎದ್ದು ಕುಳಿತರು 5
ಕನಸಿನೊಳಗೆ ದೇವರ ದರುಶನಾಗುತ ಶ್ರೀ-ಮನಸಿಜನ ಪಿತನ ದಯವು ಘನ ಘನಾಗುತ ||ಜಿನಸು ಜಿನಸು ಪದ ಸುಳಾದಿಗಳನು ಪೇಳುತ ಆಗನೆನಿಸಿದಾಕ್ಷಣದಲಿ ಮುಖದಿ ಕವಿತ ಹೊರಡುತಾ 6
ಮತ್ತೆ ಹೊರಟು ಆದವಾನಿ ಸ್ಥಳಕೆ ಬಂದರು ಏನುಹತ್ತು ಜನರಿಗೆ ಪೇಳಿದ ವಾಕ್ಯ ಸತ್ಯವೆಂದರು ||ಸುತ್ತು ಮುತ್ತು ನೂರಾರು ದಾಸರು ನೆರೆದರು ಆನಿಸತ್ತಿಗಿ ಪಲ್ಲಕ್ಕಿಯವರೆ ಶಿಷ್ಯರಾದರು 7
ಯಾತ್ರಿ ತೀರ್ಥಗಳನು ಬಹಳ ಚರಿಸಿ ನೋಡುತ ಸ-ತ್ಪಾತ್ರರಲ್ಲಿ ನೋಡಿ ಧರ್ಮಗಳನೆ ಮಾಡುತ ||ರಾತ್ರಿ ಹಗಲು ವಿಜಯ ವಿಠ್ಠಲನೆಂದು ಪಾಡುತ ಜನರಶ್ರೋತ್ರಿಯಿಂದ್ರಿಯಗಳ ಉದ್ಧಾರ ಮಾಡುತ 8
ಪೂರ್ತಿ e್ಞÁನದಿಂದ ಕರ್ಮವೆಲ್ಲ ಕಡಿದರು ಸ-ತ್ಕೀರ್ತಿವಂತರಾಗಿ ಬಹಳ ಖ್ಯಾತಿ ಪಡೆದರು ||ಕಾರ್ತಿಕ ಶುದ್ಧ ದಶಮಿ ದಿವಸ ನಡೆದರು ಶ್ರೀಸತ್ಯರಮಣ ಕೇಶವ ವಿಠಲನ್ನ ಕಂಡರು9
****