Showing posts with label ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ gurumahipati. Show all posts
Showing posts with label ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ gurumahipati. Show all posts

Wednesday 1 September 2021

ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ ankita gurumahipati

ಕಾಖಂಡಕಿ ಶ್ರೀ ಕೃಷ್ಣದಾಸರು

ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ | ದುರಿತ ಭಯ ಪರಿಹರಿಸಿ ಸಲಹೆನ್ನ ತಂದೆ ಪ 


ಬಂದರ ವಿಭೀಷಣಗ ಅಭಯಕರವಿತ್ತೇ | ಬಂಧನಕ್ಕೋಳಗಾದ ಗಜರಾಜನನು ನೆಗಹಿ | ಛಂದದಭಿಮಾನುಳಿಹಿ ದ್ರೌಪದಿಯ ಕಾಯ್ದೆ 1 

ಕಲುಷವಾರಿಸಿ ಮುನಿ ಸತಿಯ ನೀನುದ್ದರಿಸಿ | ಒಲಿದು ಧ್ರುವಗಾನಂದ ಪದವಿತ್ತೆ ಧರಿಲಿ | ಸಿಲುಕಿರಲು ಲಾಕ್ಷಗೃಹದಿ ಪಾಂಡವರನುಳುಹಿ | ಲಲನೆ ಗರ್ಭದಿ ಪರೀಕ್ಷಿತನ ಕಾಯ್ದೆ ಸ್ವಾಮಿ 2 

ಅವರ ದಾಸಾನುದಾಸರ ಭಾಗ್ಯವೆಮಗಿಲ್ಲಾ | ತವನಾಮಧಾರಕೆನಿಸಿದ ಬಿರುದಿಗಿಂದು | ಕುವಲಯ ಶ್ಯಾಮ ಗುರು ಮಹಿಪತಿ ಸುತ ಪ್ರಭುವೆ | ಯಮನ ಬಾಧೆಯ ಬಿಡಸೋ ಬ್ಯಾಗೊದಿಗಿ ಬಂದು 3

***