Showing posts with label ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ತರುಳ ನಳಿನ ಷಟ್ ಚರಣ ಬಿಡ ಬಲ್ಲದೆ vasudeva vittala. Show all posts
Showing posts with label ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ತರುಳ ನಳಿನ ಷಟ್ ಚರಣ ಬಿಡ ಬಲ್ಲದೆ vasudeva vittala. Show all posts

Wednesday 1 September 2021

ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ತರುಳ ನಳಿನ ಷಟ್ ಚರಣ ಬಿಡ ಬಲ್ಲದೆ ankita vasudeva vittala

 ..

kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ

ತರುಳ ನಳಿನ ಷಟ್ ಚರಣ ಬಿಡ ಬಲ್ಲದೆ ಪ


ಹನುಮನ ಭಜನೆಂಬ ಘನವಾರಿ ಪೂರಿತ

ಮನ ಸರೋವರ ಅಯನವಾಗಿಪ್ಪಾ

ಜನಕಸುತೆ ಹಂಸಿ ಮನಸಾಪ ಹಾರಿ

ದಿನಕರನ್ವಯದಿಂದ ವಿನುತವಾಗಿಪ್ಪ 1


ಅಮರರೋತ್ತಮರೆಂಬ ಭ್ರಮರರಾ ರವಗಳ

ಸಮಯೋಚಿತ ಸಾಮಭಿ ಸೇವಿತ

ವಿಮಲಾತಮದಿಂದ ಸಾಂದ್ರ ಶಮಲಾತಿ ದೂರ

ಕಮಲಾಸನ ಪ್ರಿಯ ಕಮಲೋತ್ತುಮ ಪಾದ 2


ಶಿಲೆಯ ಬಾಲೆಯ ಮಾಡಿ ಮಲವಳಿದು ಮುನಿ

ಕುಲವಗೆಡಿಸಿ ಸತ್ಕುಲನೆನಿಸಿದೆ

ಜಲಧಿಯೊಳಗೆ ಸೇತು ನಿಲಿಸಿ ಸಜ್ಜನರಿಗೆ

ನೆಲೆ ವಾಸುದೇವವಿಠಲದೇವ ಪಾದಪದುಮ3

***