Showing posts with label ಶ್ರೀಜನಾರ್ದನವಿಠಲ ಶೃಂಗಾರ ಪರಿಪೂರ್ಣ gurugopala vittala janardhana vittala dasa stutih. Show all posts
Showing posts with label ಶ್ರೀಜನಾರ್ದನವಿಠಲ ಶೃಂಗಾರ ಪರಿಪೂರ್ಣ gurugopala vittala janardhana vittala dasa stutih. Show all posts

Saturday 1 May 2021

ಶ್ರೀಜನಾರ್ದನವಿಠಲ ಶೃಂಗಾರ ಪರಿಪೂರ್ಣ ankita gurugopala vittala janardhana vittala dasa stutih

ಶ್ರೀ ಗುರುಗೋಪಾಲದಾಸರು ಶ್ರೀ ತಿರುಮಲದಾಸರಿಗೆ " ಶ್ರೀ ಜನಾರ್ದನ ವಿಠಲ " ಎಂದು ಯಾಕಿಂತದೊಂದಿಗೆ ದಾಸ ದೀಕ್ಷೆ ಕೊಟ್ಟಿದ್ದಾರೆ. ಆ ಅಂಕಿತ ಪದ ಹೀಗಿದೆ...

ರಾಗ : ಕಾಂಬೋಧಿ      ತಾಳ : ಝ೦ಪೆ

ಶ್ರೀ ಜನಾರ್ದನವಿಠಲ ಶೃಂಗಾರ ಪರಿಪೂರ್ಣ ।

ಅಜಭವಾಮರೇಂದ್ರ ಸೇವ್ಯಾ ।

ನೈಜ ಭಾವದಿ ನಮಿಸಿ ಬೇಡಿದವನಿಗೆ ವರವ ।

ನಿಜವಾಗಿ ಪಾಲಿಸುವೆನೆಂದು ದಯದಲಿ ಬಂದ್ಯಾ ।। ಪಲ್ಲವಿ ।।

ವೇಣುಗೋಪಾಲದಾಸರು ಕರುಣಾವನೆ ಮಾಡಿ ।

ಪಾಣಿ ಪಿಡಿದದ್ದು ನೋಡಿ ।

ಕ್ಷೋಣಿಯೊಳುಳ್ಳಂಥ ತೀರ್ಥ ಯಾತ್ರಾದಿಗಳ ।

ಸ್ನಾನಾದಿ ಫಲವ ನೀಡಿ ।

ವಾಣಿ ಅರಸಾನಿಂದ ತೃಣ ಜೀವ ಪರಿಯಂತ ।

ಮೇಣು ತಾರತಮ್ಯ ನೋಡಿ ।

ಅನಾಜ್ಞದವನೆಂದು ಅತಿ ಮಮತೆಯಿಂದಲಿ ।

ನೀನೆ ವ್ಯಕ್ತವಾಗಿ ನಿಂತು ಉದ್ಧರಿಪುದಕೆ ।। ಚರಣ ।।

ಮಾನ ಮಮತೆಯೆಂಬ ಹೀನ ಅಹಂಕಾರವನು ।

ಹಾನಿ ಮಾಡುವೆ ನೆನುತಲಿ ।

ಜ್ಞಾನ ಭಕುತಿಯ ಕೊಟ್ಟು ಧ್ಯಾನ ಮಾರ್ಗವ ತೋರಿ ।

ಪ್ರಾಣನಾ ಪಾದದಲಿ ।

ಆನಂದ ಉಂಬದಕೆ ಅತಿ ವೇಗ ಪೊಂದಿಸಿ ।

ಶೀಲ ಸ್ವಭಾವದಲಿ ।

ಭಾನು ಕೋಟಿ ತೇಜ ಭಕುತ ಜನರಾಧಾರಿ ।

ಧೇನುವತ್ಸಲನ ಪೊರೆವ ಪರಿಯಂತೆ ದಯದಲಿ ।। ಚರಣ ।।

ಮನ್ಮಥ ನಾಮ ಸಂವತ್ಸರಾ ಮಾಘ ಶುದ್ಧ ಬಿದಿಗಿ ।

ಮಂಗಳವಾರದಲ್ಲಿ ।

ಮನ್ಮನೋಭೀಷ್ಟೆಯನು ಕೊಡಲು ಗುರುಗೋಪಾಲ ।

ದಾಸರ ಮುಖದಲಿ ।

ಸನ್ಮಾನದಲ್ಲಿ ಸಂಗೀತ ನಾಮ ಸ್ಮರಣೆ ।

ಎನ್ನು ಪೇಳುಪೇ ನೆನುತಲಿ ।

ಚಿನ್ಮಯನೇ ಪುನ್ನಾಡಿಯೊಳಗೆ ಪೊಳವೇನೆಂದು ।

ಘನ್ನ ಕರುಣಾದಿ ಬಂದ್ಯಾ ಶ್ರೀ ಜನಾರ್ದನವಿಠಲ ।। ಚರಣ ।।

****

by ಆಚಾರ್ಯ ನಾಗರಾಜು ಹಾವೇರಿ, ಗುರು ವಿಜಯ ಪ್ರತಿಷ್ಠಾನ

ಜನಾರ್ದನವಿಠಲ ಎಂದು ಅಂಕಿಂತದೊಂದಿಗೆ ಶ್ರೀ ಗುರುಗೋಪಾಲದಾಸರು ಶ್ರೀ ತಿರುಮಲದಾಸರಿಗೆ ದಾಸ ದೀಕ್ಷೆ  ನೀಡಿದರು. ಇವರ ಪ್ರೀತಿಯ ಶಿಷ್ಯರೇ ಶ್ರೀ ಅಭಿನವ ಜನಾರ್ದನ ವಿಠಲರು.

ಶ್ರೀ ಅಭಿನವ ಜನಾರ್ದನ ವಿಠಲರ ಕಾಲ : ಕ್ರಿ ಶ 1742 - 1822

ಶ್ರೀ ಅಭಿನವ ಜನಾರ್ದನ ವಿಠಲರು ಶ್ರೀ ಗೋಪಾಲದಾಸರ ತಮ್ಮಂದಿರೂ, ಅಪರೋಕ್ಷ ಜ್ಞಾನಿಗಳೂ ಆದ ಶ್ರೀ ಗುರುಗೋಪಾಲದಾಸರ ಶಿಷ್ಯ ಪರಂಪರೆಗೆ ಸೇರಿದವರು.

****