Showing posts with label ಶ್ರೀತುಳಸಿಯಾ ಸೇವಿಸಿ vijaya vittala SRI TULASIYA SEVISI. Show all posts
Showing posts with label ಶ್ರೀತುಳಸಿಯಾ ಸೇವಿಸಿ vijaya vittala SRI TULASIYA SEVISI. Show all posts

Thursday 17 October 2019

ಶ್ರೀತುಳಸಿಯಾ ಸೇವಿಸಿ ankita vijaya vittala SRI TULASIYA SEVISI

 ರಾಗ ಭೌಳಿ
Audio by Mrs. Nandini Sripad

ಶ್ರೀ ವಿಜಯದಾಸಾರ್ಯ ವಿರಚಿತ ಶ್ರೀ ತುಳಸೀ ಮಹಿಮಾ ಸ್ತೋತ್ರ 
( ವಾರ್ಧಿಕ ಷಟ್ಪದಿ )


ಶ್ರೀ ತುಳಸಿಯ ಸೇವಿಸಿ ॥ ಪ ॥
ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ
ಗಾತರದ ಮಲವಳಿದು ಮಾತೆಯೆಂಬನಿತರೊಳು
ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯ ॥ ಅ.ಪ ॥

ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ 
ಪದುಮನಾಭನು ತಾನು ಉದುಭವಿಸಿ ಬರಲಂದು 
ಉದುರಿದುವು ಕಣ್ಣಿಂದ ಉದಕ ಉತ್ಸಹದಿಂದ
ಲದೆ ತುಳಸಿ ನಾಮನಾಗೆ ॥
ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು 
ಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ -
ತ್ಪದವಿಗೆ ಸಿದ್ಧವೆಂದು ಮುದದಿಂದ ತಿಳಿದು 
ವೃಂದಾವನ ರಚಿಸಿದರೈಯ ॥ 1 ॥

ಮೂಲದಲಿ ಸರ್ವ ತೀರ್ಥಗಳುಂಟು ತನ್ಮಧ್ಯೆ 
ಕಾಲ ಮೀರದೆ ಸರ್ವ ನದನದಿಗಳಮರಗಣ 
ಮೇಲೆ ದಳ ಒಂದರಲಿ ಒಂದೊಂದು ಮೂರುತಿಯು ವಾಲಯವಾಗಿಪ್ಪುದು ॥
ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು 
ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ - 
ರ್ಮಾಲ್ಯವನು ಸತತ ಕರ್ಣದಲಿ ಧರಿಸಿದ ಮನುಜ ಕಾಲನಾಳಿಗೆ ಶೂಲನೊ ॥ 2 ॥

ಉದಯದೊಳಗೆದ್ದು ನೀರೆರೆದು ಮಜ್ಜನಗೈದು 
ತುದಿ ಬೆರಳಿನಿಂದ ಮೃತ್ತಿಕೆಯ ಫಣೆಯೊಳಗಿಟ್ಟು 
ಮುದದಿಂದಲೊಂದು ಪ್ರದಕ್ಷಿಣಿ ನಮಸ್ಕಾರ
ತದನಂತರದಲಿ ಭಜನೆ ॥
ವದನದೊಳು ಗೈಯೆ ಧರೆಯೊಳಗಿದ್ದ ಸರ್ವನದ - 
ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ 
ಒದಗುವುದು ಹಿಂದಣಾನಂತ ಜನ್ಮಗಳಘವ 
ತುದಿ ಮೊದಲು ದಹಿಪುದಯ್ಯ॥ 3 ॥

ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ 
ಆವವನ ಮನೆಯಲ್ಲಿ ಹರಿದಾಸರಾ ಕೂಟ 
ಆವವನ ಭುಜದಲ್ಲಿ ತಪ್ತಮುದ್ರಾಂಕಿತವು
ಪಾವಮಾನಿಯ ಮತದೊಳು ॥
ಆವವನು ಕಾಲತ್ರಯವ ಕಳೆವ ನಾವಲ್ಲಿ 
ಶ್ರೀ ವಾಸುದೇವ ಮುನಿದೇವಾದಿ ಗಣ ಸಹಿತ 
ಕಾವುತ್ತಲಿಪ್ಪ ಬಲಿಗೊಲಿದಂತೆ ತೊಲಗದಲೆ
ಭಾವಿಸಿರಿ ಭಾವಜ್ಞರು ॥ 4 ॥

ಕಂಡರೆ ದುರಿತಕ್ಕೆ ಕೆಂಡವನು ಬೀರುವುದು 
ಕೊಂಡಾಡಿದರೆ ಪುಣ್ಯವಪರಿಮಿತವುಂಟು ಮೈ - 
ದಿಂಡುಗೆಡಹಿದರೆ ಪುನರಪಿ ಜನನವಿಲ್ಲ ಸಲೆ 
ದಂಡ ವಿಟ್ಟವ ಮುಕ್ತನೊ ॥
ಚಂಡಾಲ ಕೇರಿಯೊಳು ಇರಲು ಹೀನಯವಲ್ಲ 
ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು 
ತಂಡ ತಂಡದ ಕುಲಕೆ ಅವರವರ ಯೋಗ್ಯ ಫಲ ಕಂಡವರಿಗುಂಟೆ ಅಯ್ಯ ॥ 5 ॥

 ರಾಗ ಸಾರಮತಿ 

ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ 
ಸ್ತೋತ್ರವನೆ ಮಾಡುತ್ತ ದಿವ್ಯವಾಗಿಹ ತ್ರಿದಳ 
ಪ್ರತ್ಯೇಕ ಪಾತ್ರೆಯಲಿ ತೆಗೆದು ಶೋಧಿಸಿ ತುಂಬಿ 
ವಿತ್ತಾದಿಯಲಿ ತಾರದೆ ॥
ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ 
ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - 
ರ್ವೋತ್ತರಭಿಮುಖನಾಗಿ ಭಕ್ತಿಯಿಂ ತರಬೇಕು 
ಹೊತ್ತು ಮೀರಿಸಲಾಗದೊ ॥ 6 ॥

ಕವಿ ಮಂಗಳವಾರ ವೈಧೃತಿ ವ್ಯತೀಪಾತ
ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ
ದಿವಸ ದ್ವಾದಶಿ ಶ್ರೇಷ್ಠ ಉಪರಾಗ ಪಿತೃಶ್ರಾದ್ಧ
ಇವುಗಳಲಿ ತೆಗೆಯಾದಿರಿ ॥
ನವವಸನ ಪೊದ್ದು ಊಟವ ಮಾಡಿ ತಾಂಬೂಲ -
ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ -
ಸುವುದುಚಿತವಲ್ಲೆಂದು ತಿಳಿದು ಕೊಂಡಾಡುತಿರಿ 
ದಿವಸ ದಿವಸಗಳೊಳಯ್ಯ ॥ 7 ॥

ದಳವಿದ್ದರೇ ಒಳಿತು ಇಲ್ಲದಿದ್ದರೆ ಕಾಷ್ಟ
ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು
ತುಳಸಿ ನಿರ್ಮಾಲ್ಯವಾದರು ತ್ರಿವಾರದಲಿ
ತೊಳೆ ತೊಳೆದು ಏರಿಸಬಹುದು ॥
ತುಳಸಿ ಒಣಗಿದ್ದರೂ ಲೇಶದೋಷಗಳಿಲ್ಲ
ತುಳಸಿ ವಿರಹಿತವಾದ ಪೂಜೆಯದು ಸಲ್ಲದು
ತುಳಸಿ ತುಳಸೀ ಎಂದು ಸ್ಮರಣೆಯಾದರು ಮಾಡಿ ಜಲಜಾಕ್ಷನರ್ಚಿಸಿರೈಯ್ಯ ॥ 8 ॥

ತುಳಸಿ ಇಲ್ಲದ ಸದನ ಹೊಲೆಮಾದಿಗರ ಸದನ
ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ
ತುಳಸಿ ಇಲ್ಲದ ತೀರ್ಥವೆಂದಿಗಿದ್ದರು ವ್ಯರ್ಥ 
ತುಳಸಿ ಬಲು ಪ್ರಾಧಾನ್ಯವೊ ॥
ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ
ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ
ತುಳಸಿದಳ ಹರಿಗೆ ಅರ್ಪಿಸಿದವನ ಪುಣ್ಯಕ್ಕೆ
ನೆಲೆಯ ನಾ ಕಾಣೆನಯ್ಯ ॥ 9 ॥

ಶಿವನ ಸತಿ ಪ್ರಹ್ಲಾದ ನಾರದ ವಿಭೀಷಣನು
ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು
ಇವರೆ ಮೊದಲಾದವರು ಭಕ್ತಿಪೂರ್ವಕದಲಿ
ವಿವರವನು ತಿಳಿದರ್ಚಿಸಿ ॥
ತವಕದಿಂ ತಂತಮ್ಮ ಘನ ಪದವನೈದಿದರು
ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು
ಜವಭಟರನೋಡಿಸೀ ಜಡದೇಹವನು ನೀಗಿ 
ಭವದೂರರಾದರೈಯ ॥ 10 ॥

 ರಾಗ ಭೌಳಿ 

ಉದಯಕಾಲದೊಳೆದ್ದು ಆವನಾದರು ತನ್ನ
ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ
ಸದಮಲಾ ತುಳಸಿಯನು ಸ್ತೋತ್ರಮಾಡಿದ ಕ್ಷಣಕೆ 
ಮದಗರ್ವ ಪರಿಹಾರವೊ -॥
ಇದೆ ತುಳಸಿ ಸೇವಿಸಲು ಪೂರ್ವದಲಿ ಕಾವೇರಿ
ನದಿಯ ತೀರದಲೊಬ್ಬ ಭೂಸುರ ಪದಕೆ ಪೋದ
ಪದಪದೆಗೆ ಸಿರಿ ವಿಜಯವಿಠ್ಠಲಗೆ ಪ್ರಿಯಳಾದ 
ಮದನತೇಜಳ ಭಜಿಸಿರೈಯ ॥ 11 ॥
***

Sri tulasiya sevisi || pa ||

Sri tulasiyala seve pritiyindali made |
Gatarada malavalidu mateyembanitarolu |
Pataka pariharisi punitaranu maduvalu yatakanumanavayya || a. Pa ||

Sudhegadala mathisuva samayadali vaidyanagi |
Adumanabanu tanu udubavisi baralamdu uduridavu kanninda |
Udakavutsahadindalade tulasinamavage |
Tridasarondisuta modadim kondadidaru |
Odagi sujanaru tamma sadanadalli nitya sa |
Tpadavige siddhavendu mudadinda tilidu vrunavana rachisidaraiyya || 1 ||

Muladali sarvatirthagaluntu tanmadhai |
Kalamirade sarva nadanadigalamaragana |
Mele dala ondarali ondondu murutiyu valayavagippudu |
Murlokagala dharma vratake migilenisuvudu |
Nilamegasyamagarpisida tulasi nirmalyavanu
Satata karnadali dharisida manuja kalanalige sulano || 2 ||

Udayadolageddu nireredu majjanagaidu |
Tudi beralininda mruttikeya paniyolagittu |
Mudadimdalondu pradakshine namaskara tadanantaradalli Bajane |
Vadanadolu gaiya dhareyolagidda sarvanada |
Nadigalige nurmadiyatre madida Pala |
Odaguvudu hindanananta janmagalagava tudimodalu dahipudayya || 3 ||

Avavana maneyalli tulasi saligrama |
Avavana maneyalli haridasarakuta |
Avavana Bujadalli taptamudrankitavu pavamaniya matadolu |
Avavanu kalatrayava kalevanavalli |
Sri vasudeva munidevadi ganasahita |
Kavuttalippa baligolidamte tolagadale || 4 ||

Kandare duritakke kendavanu biruvudu |
Kondadidare punyavaparimitivuntu mai- |
Dindugedahidare punarapi jananavilla sale dandavittava muktano |
Chandala keriyolu iralu hinayavalla |
Pandurangakshetra sarimigilu enisuvudu |
Tandatandada kulake avaravara yogyapala kandavarigunte ayya || 5 ||

Chittasuddanu Agi munjaneyolu tulasi |
Stotravane madutta divyavagiha tridala |
Pratyeka patreyali tegedu sodhisi tumbi vittadiyali tarade |
Matte vastradi hasta Sileyarka eranda |
Patradali taradale bumiyolagidade pu |
Rvottarabimukanagi baktiyim tarabeku hottu mirisalagado || 6 ||

Kavimangalavara vaidhruti vyatipata |
Avisasiya sangama parvani punyakala |
Divasa dvadasi seshtha uparaga pitrusraddha ivugalali tegeyadiri |
Navavasana poddu utamadi tambula |
Saviyutta muttadiri yuvati sudrarim tarisuvudu |
Cittavallemdu tilidu kondadutiri divasa divasagalolayya || 7 ||

Dalaviddare olitu illadiddare kashtha |
Ele mruttikegalinda puje madalibahudu |
Tulasi nirmalyavadaru toletoledu Erisalibahudu |
Tulasi onagiddaru lesadoshagalilla |
Tulasi virahitavada pujeyadu salladu |
Tulasi tulasi endu smaraneyadaru madi jalajakshanarchisiraiyya || 8 ||

Tulasi illada sadana holemadigara sadana |
Tulasi illada bidi narakakelasuva hadi |
Tulasi illada tirthavendigiddaru vyartha tulasi balu pradhanyavo |
Tulasi misritavada naivedyagatisadhya |
Tulasi dharisida deha paramasarthakavayya |
Tulasi dala harige arpisidavana punyakke neleya na kanenayya || 9 ||
Sivanasati prahlada narada vibishananu |
Dhruva ambarisha sasibindu rukmangadanu |
Ivare modaladavaru baktipurvakadali vivaravanu tilidarcisi |
Tavakadim tantamma Ganapadavanaididaru |
Buvanadolagulla nirmala janaru Bajisidaru |
Javabataranodisi jadadehavanu nigi bavaduraradaraiyya || 10 ||

Udayakaladoleddu avanadaru tanna
Hrudayanirmalanagi baktipurvakadimda |
Sadamala tulasiyanu stotramadida kshanake madagarva pariharavo |
Ide tulasi sevisalu purvadali kaveri |
Nadiya tiradalobba busura padake poda |
Padapadege sirivijayavitthalage |
Priyalada madanatejala bajisiraiyya || 11 ||
***

ಶ್ರೀ ತುಳಸಿ ಮಹಿಮೆಯ ಹಾಡು

ರಾಗ: ಭೂಪಾಳಿ

ಶ್ರೀ ತುಳಸಿಯಾ ಸೇವಿಸಿ ||ಪ||c
ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ
ಗಾತರದ ಮಲವಳಿದು ಮಾತೆಯೆಂಬನಿತರೊಳು
ಪಾತಕ ಪರಿಹರಿಸಿ ಪುನೀತರನು ಮಾಡುವಳು
ಯಾತಕನುಮಾನವಯ್ಯಾ ||ಅ||ಪ||

ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ
ಪದುಮನಾಭನು ತಾನು ಉದುಭವಿಸಿ ಬರಲ೦ದು
ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ
ತುಳಸಿನಾಮವಾಗೇ ||

ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು
ಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ
ತ್ಪದವಿಗೆ ಸಿದ್ದವೆಂದು ಮುದದಿಂದ ತಿಳಿದು
ವೃಂದಾವನ ರಚಿಸಿದರಯ್ಯಾ ||೧||

ರಾಗ: ಮಲಯಮಾರುತ

ಮೂಲದಲಿ ಸರ್ವತೀರ್ಥಗಳುಂಟು ತನ್ಮಧ್ಯೆ
ಕಾಲ ಮೀರದೆ ಸರ್ವನದನದಿಗಳಮರಗಣ
ಮೇಲೆ ದಳ ಒಂದರಲಿ ಒಂದೊಂದು ಮೂರುತಿಯು
ವಾಲಯವಾಗಿಪ್ಪುದು ||

ಮೂರ್ಲೋಕಗಳ ಧರ್ಮವ್ರತಕೆ ಮಿಗಿಲೆನಿಸುವುದು
ನೀಲೆಮೇಘಶ್ಯಾಮ ಗರ್ಪಿಸಿದ ತುಳಸಿ ನಿ
ರ್ಮಾಲ್ಯವನು ಸತತ ಕರ್ಣದಲಿ ಧರಿಸಿದ ಮನುಜ
ಕಾಲನಾಳಿಗೆ ಶೂಲನೋ ||೨||

ರಾಗ: ರಂಜಿನಿ

ಉದಯದೊಳಗೆದ್ದು ನೀರೆರೆದು ಮಜ್ಜನಗೈದು
ತುದಿಬೆರಳಿನಿಂದ ಮೃತ್ತಿಕೆ ಫಣೆಯೊಳಿಟ್ಟು
ಮುದದಿಂದಲೊಂದು ಪ್ರದಕ್ಷಿಣೆ ನಮಸ್ಕಾರ
ತದನಂತರದಲಿ ಭಜನೇ ||

ವದನದೊಳುಗೈಯೆ ಧರೆಯಮೇಲಿದ್ದ ಸರ್ವ
ನದನದಿಗಳಿಗೆ ನೂರ್ಮಡಿಯಾತ್ರೆ ಮಾಡಿದ ಫಲ
ಒದಗುವುದು ಹಿಂದಣಾನಂತ ಜನ್ಮಗಳಘವ
ತುದಿಮೊದಲು ದಹಿಪುದಯ್ಯಾ ||೩||

ರಾಗ: ಬಿಲಹರಿ

ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ
ಆವವನ ಮನೆಯಲ್ಲಿ ಹರಿದಾಸರಾ ಕೂಟ
ಆವವನ ಭುಜದಲ್ಲಿ ತಪ್ತ ಮುದ್ರಾಂಕಿತವು
ಪಾವಮಾನಿಯ ಮತದೊಳು

ಆವವನು ಕಾಲತ್ರಯ ಕಳೆವನಾವಲ್ಲಿ
ಶ್ರೀ ವಾಸುದೇವ ಮುನಿದೇವಾದಿ ಗಣಸಹಿತ
ಕಾವುತ್ತಲಿಪ್ಪ ಬಲಿಗೊಲಿದಂತೆ ತೊಲಗದೆಲೆ
ಭಾವಿಸಿರಿ ಭಾವಜ್ಜ್ನರೂ ||೪||

ರಾಗ: ಅಠ್ಠಾಣ:

ಕಂಡರೆ ದುರಿತಕ್ಕೆ ಕೆಂಡವನು ಬೀರುವುದು
ಕೊಂಡಾಡಿದರೆ ಪುಣ್ಯವಪರಿಮಿತ ಉಂಟು ಮೈ
ದಿಂಡುಗೆಡಹಿದರೆ ಪುನರಪಿಜನನವಿಲ್ಲ ಸಲೆ
ದಂಡವಿಟ್ಟವ ಮುಕ್ತನೋ ||

ಚಂಡಾಲಕೇರಿಯೊಳು ಇರಲು ಹೀನಯವಲ್ಲ
ಪಾಂಡುರಂಗಕ್ಷೇತ್ರ ಸರಿಮಿಗಿಲು ಎನಿಸುವುದು
ತಂಡತಂಡದ ಕುಲಕೆ ಅವರವರ ಯೋಗ್ಯಫಲ
ಕಂಡವರಿಗುಂಟೆ ಅಯ್ಯಾ ||೫||

ರಾಗ: ಮೋಹನ:

ಚಿತ್ತಶುದ್ದನ ಆಗಿ ಮುಂಜಾನೆಯೊಳು ತುಳಸಿ
ಸ್ತೋತ್ರವನು ಮಾಡುತ್ತ ದಿವ್ಯವಾಗಿಹ ತ್ರಿದಳ
ಪ್ರತ್ಯೇಕ ಪಾತ್ರೆಯಲಿ ತೆಗೆದು ಶೋಧಿಸಿ ತುಂಬಿ
ವಿತ್ತಾದಿಯಲಿತಾರದೇ ||

ಮತ್ತೆ ವಸ್ತ್ರದಿ ಹಸ್ತಶಿಲೆ ಆರ್ಕಏರಂಡ
ಪತ್ರದಲಿ ತಾರದೆಲೆ ಭೂಮಿಯೊಳಗಿಡದೆ ಪೂ
ರ್ವೋತ್ತರಭಿಮುಖನಾಗಿ ಭಕ್ತಿಯಿಂ ತರಬೇಕು
ಹೊತ್ತು ಮೀರಿಸಲಾಗದು ||೬||

ರಾಗ: ಷಣ್ಮುಖಪ್ರಿಯ:

ಕವಿ ಮಂಗಳವಾರ ವೈಧೃತಿ ವೃತೀಪಾತ
ರವಿಶಶಿಯ ಸಂಗಮ ಪರ್ವಣಿ ಪುಣ್ಯಕಾಲ
ದಿವಸ ದ್ವಾದಶಿ ಶ್ರೇಷ್ಟ ಉಪರಾಗ ಪಿತೃಶ್ರಾದ್ದ
ಇವುಗಳಲಿ ತೆಗೆಯದಿರೀ ||

ನವವಸನಪೊದ್ದು ಊಟವ ಮಾಡಿ ತಾಂಬೂಲ
ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ
ಸುವುದುಚಿತವಲ್ಲೆಂದು ತಿಳಿದು ಕೊಂಡಾಡುತಿರಿ
ದಿವಸ ದಿವಸಗೊಳೊಳಯ್ಯಾ ||೭||

ರಾಗ: ಸಿಂಧುಭೈರವಿ

ದಳವಿದ್ದರೇ ಒಳಿತು ಇಲ್ಲದಿದ್ದರೆ ಕಾಷ್ಟ
ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು
ತುಳಸಿ ನಿರ್ಮಾಲ್ಯವಾದರೂ ತ್ರಿವಾರದಲಿ ತೊಳೆದು
ತೊಳೆದೇರಿಸಲಿ ಬಹುದೂ ||

ತುಳಸಿ ಒಣಗಿದ್ದರೂ ಲೇಶದೋಶಗಳಲ್ಲ
ತುಳಸಿ ವಿರಹಿತ ಪೂಜೆಯದು ಸಲ್ಲದೋ
ತುಳಸೀ ತುಳಸೀ ಎಂದು ಸ್ಮರಣೆಯಾದರೂ ಮಾಡಿ
ಜಲಜಾಕ್ಷನರ್ಚಿಸಿರಯ್ಯಾ ||೮||

ರಾಗ: ಕಾನಡ

ತುಳಸಿ ಇಲ್ಲದ ಸದನ ಹೊಲೆಮಾದಿಗರ ಸದನ
ತುಳಸಿ ಇಲ್ಲದ ಬೀದಿ ನರಕಕೆಳೆಸುವ ಹಾದಿ
ತುಳಸಿ ಇಲ್ಲದ ತೀರ್ಥವೆಂದಿಗಿದ್ದರೂ ವ್ಯರ್ಥ
ತುಳಸಿ ಬಲು ಪ್ರಾಧಾನ್ಯವೋ ||

ತುಳಸಿ ಮಿಶ್ರಿತವಾದ ನೈವೇದ್ಯಗತಿ ಸಾಧ್ಯ
ತುಳಸಿ ಧರಿಸಿದ ದೇಹ ಪರಮ ಸಾರ್ಥಕವೈಯ್ಯ
ತುಳಸಿದಳ ಹರಿಗೆ ಅರ್ಪಿಸಿದವನ ಪುಣ್ಯಕ್ಕೆ
ನೆಲೆಯ ನಾಗಾಣೆನಯ್ಯಾ ||೯||

ರಾಗ: ಸುರುಟಿ

ಶಿವನ ಸತಿ ಪ್ರಹ್ಲಾದ ನಾರದ ವಿಭೀಷಣನು
ಧ್ರುವ ಅಂಬರೀಶ ಶಶಿಬಿಂದು ರುಕುಮಾಂಗದನು
ಇವರೆ ಮೊದಲಾದವರು ಭಕುತಿ ಪೂರ್ವಕದಿಂದ
ವಿವರವನು ತಿಳಿದರ್ಚಿಸೀ ||

ತವಕದಿಂ ತಂತಮ್ಮ ಘನಪದವನೈದಿದರು
ಭುವನದೊಳಗುಳ್ಳ ನಿರ್ಮಲಜನರು ಭಜಿಸಿದರು
ಜವಭಟರನೋಡಿಸೀ ಜಡದೇಹವನು ನೀಗಿ
ಭವ ದೂರರಾದರಯ್ಯಾ ||೧೦||

ರಾಗ: ಮಧ್ಯಮಾವತಿ:

ಉದಯಕಾಲದೊಳೆದ್ದು ಆವನಾದರೂ ತನ್ನ
ಹೃದಯನಿರ್ಮಲನಾಗಿ ಭಕುತಿಪೂರ್ವಕದಿಂದ
ಸದಮಲಾ ತುಳಸಿಯನು ಸ್ತೋತ್ರಮಾಡಿದ ಕ್ಷಣಕೆ
ಮದಗರ್ವ ಪರಿಹಾರವೋ ||

ಇದೆ ತುಳಸಿ ಸೇವಿಸಲು ಪೂರ್ವದಲಿ ಕಾವೇರಿ
ನದಿಯ ತೀರದಲ್ಲೊಬ್ಬ ಭೂಸುರ ಪದಕೆ ಪೋದ
ಪದೆಪದೆಗೆ ಸಿರಿ ವಿಜಯ ವಿಠ್ಠಲಗೆ ಪ್ರಿಯಳಾದ
ಮದನತೇಜಳ ಭಜಿಸಿರಯ್ಯಾ ||೧೧||
ಶ್ರೀ ತುಳಸಿಯಾ ಸೇವಿಸಿ ||ಪ||
*******