Showing posts with label ಶ್ರೀರಂಗ ಯಾತ್ರೆಯನು ಮಾಡಿಬಾರೆಂದೆನ್ನ ಈ ರೀತಿಯನುವ ಮಾಡಿದೆಯ ಸ್ವಾಮಿ vaikunta vittala. Show all posts
Showing posts with label ಶ್ರೀರಂಗ ಯಾತ್ರೆಯನು ಮಾಡಿಬಾರೆಂದೆನ್ನ ಈ ರೀತಿಯನುವ ಮಾಡಿದೆಯ ಸ್ವಾಮಿ vaikunta vittala. Show all posts

Sunday 1 August 2021

ಶ್ರೀರಂಗ ಯಾತ್ರೆಯನು ಮಾಡಿಬಾರೆಂದೆನ್ನ ಈ ರೀತಿಯನುವ ಮಾಡಿದೆಯ ಸ್ವಾಮಿ ankita vaikunta vittala

..

kruti by ಬೇಲೂರು ವೈಕುಂಠ ದಾಸರು belur vaikunta dasaru


ಶ್ರೀರಂಗ ಯಾತ್ರೆಯನು ಮಾಡಿಬಾರೆಂದೆನ್ನ

ಈ ರೀತಿಯನುವ ಮಾಡಿದೆಯ ಸ್ವಾಮಿ ಪ


ಕಾರುಣ್ಯನಿಧಿಯೆ ವೇಲಾಪುರಾಧೀಶ್ವರನೆ

ಆರುಣ್ಯದೊಳು ಕೆಡಹಿದೆಯ ಸ್ವಾಮಿ ಅ.ಪ


ದಾರಿಯನು ತೋರಲೈತಂದ ಶ್ರೀವೈಷ್ಣವನು

ಸೇರಿಸಿದ ನೀಯಡವಿಯಸ್ವಾಮಿ

ಕಾರುಗತ್ತಲೆ ಸುರಿವ ಮಳೆಯ ಸಿಡಿಲಿನ್ನೆಲ್ಲಿ

ಸೇರುವೆನು ಈ ಗಿರಿಯೊಳೂ ಸ್ವಾಮಿ 1


ನಾರಿ ಮಕ್ಕಳು ಭೃತ್ಯರೆಲ್ಲಿ ಪೋದರೋ ಯೇನು

ಕಾರಣಬಂದೆನಯ್ಯ ಸ್ವಾಮಿ

ಭೂರಮಣ ತ್ರಿಭುವನಾಧಾರ ನೀ ನಲ್ಲದಿ

ನ್ನಾರು ಕಾವರೆನ್ನನು ಸ್ವಾಮಿ 2


ಘುಡಿಘುಡಿಸುತಲಿವೆ ಪುಲಿ ಕರಡಿ ಸುತ್ತಲು ಭೋ

ರಿಡುತಲಿವೆ ಭಕ್ಷಿಸುವಡೇ ಸ್ವಾಮಿ

ಬಿಡದೆ ಕರಿಗಳು ಕೂಗಿ ಕಂಗೆಡಿಸುತಲಿವೆ ಇದೇ

ಕಡೆಗಾಲವಾಯಿತೆಲ್ಲೋ ಸ್ವಾಮಿ 3


ನಡೆವರೆಡೆಗಾಣೆ ಇಲ್ಲಿರುವುದಾಗ ದಾಗದು ಕಷ್ಟ

ಬಡುವುದಕೆ ಗುರಿಯಾದೆನೇ ಸ್ವಾಮಿ

ಎಡಬಲಕ್ಕೊಲೆಯೆ ಕಪ್ಪು ಕಲ್ಲು ಮುಳ್ಳುಗಳಿದೆಕೋ

ಒಡೆಯ ಕೈವಿಡದೆ ಸಲಹು ಸಲಹೋ ಸ್ವಾಮಿ 4


ಒಂದೆಸಗಲೇಳಡಸಿತೆಂದು ಪೇಳುವ ನುಡಿಗೆ

ಸಂದು ಬಸವಳಿದೆನೆಲೋ ಸ್ವಾಮಿ

ಇಂದು ಸಂಧ್ಯಾ ಗಾಯತ್ರಿ ಕರ್ಮವುಳಿದುದರ

ವಿಂದಾಕ್ಷ ಸುಮ್ಮನಿಹರೇ ಸ್ವಾಮೀ 5


ಎಂದೆಂದು ಮಾತನಾಡುವನಾಥರಕ್ಷಕನೆ

ಬಂದುದೀಗೇನು ಸಿರಿಯು ನಿನಗೇ

ಬಂಧನವ ಬಿಡಿಸು ದುರ್ಮರಣದಲಿ ಕೊಲ್ಲದಿರು

ತಂದೆ ವೈಕುಂಠ ರಮಣಾ ಸ್ವಾಮೀ 6

***