Showing posts with label ಸತತ ಕಲ್ಯಾಣ ಅಚ್ಯುತ ಭಟರಿಗೆ prasannavenkata SATATA KALYANA ACHYUTA BHATARIGE. Show all posts
Showing posts with label ಸತತ ಕಲ್ಯಾಣ ಅಚ್ಯುತ ಭಟರಿಗೆ prasannavenkata SATATA KALYANA ACHYUTA BHATARIGE. Show all posts

Monday 18 November 2019

ಸತತ ಕಲ್ಯಾಣ ಅಚ್ಯುತ ಭಟರಿಗೆ ankita prasannavenkata SATATA KALYANA ACHYUTA BHATARIGE

Audio by Mrs. Nandini Sripad

ಶ್ರೀ ಪ್ರಸನ್ನ ವೆಂಕಟದಾಸರ ಕೃತಿ 

 ರಾಗ ಸಿಂಧುಭೈರವಿ        ಖಂಡಛಾಪುತಾಳ 

ಸತತ ಕಲ್ಯಾಣ ಅಚ್ಯುತ ಭಟರಿಗೆ ॥ ಪ ॥
ರತಿಪತಿಪಿತನಂಘ್ರಿರತ ಮಹಾತ್ಮರಿಗೆ ॥ ಅ ಪ ॥

ಆಧಿ ವ್ಯಾಧಿಗಳಿಲ್ಲ ಅಶುಭವಾರ್ತೆಗಳಿಲ್ಲ ।
ಕ್ರೋಧ ನೃಪಭಯವಿಲ್ಲ ಕಾಕುಮತಿ ಇಲ್ಲ ॥
ಖೇದ ಮನಕಿಲ್ಲ ಖಿನ್ನತೆಯು ಮುಖಕಿಲ್ಲ ।
ಶ್ರೀಧವನ ನವ ಭಕುತಿಶೀಲ ಜೀವರಿಗೆ ॥ 1 ॥

ಅರಿಗಳೆ ಸಖರಕ್ಕು ಅತಿವಿಷ ಅಮೃತವಕ್ಕು ।
ಉರಗ ಪೂಮಾಲೆಯಕ್ಕು ಉರಿ ತಣ್ಣಗಕ್ಕು ॥
ಶರಧಿ ಗೋಷ್ಪದವಕ್ಕು ಶರಘಾತ ಬೆಂಡಕ್ಕು ।
ನರಹರಿಯ ನಾಮವನು ನಂಬಿ ತುತಿಪರಿಗೆ ॥ 2 ॥

ಪಾಪ ತಾಪಗಳ್ಗೋಟ ಪರಿದುಬಹ ಎಡರ್ಗೋಟ ।
ಆಪತ್ತುಗಳಿಗೋಟ ಆಲಸ್ಯಕೋಟ ॥
ಕೋಪ ದಾರಿದ್ರ್ರ್ಯಕೋಟ ಕಲಿವ್ಯಸನ ಮದಕೋಟ ।

 ಶ್ರೀಪ್ರಸನ್ವೆಂಕಟನ ಭಜಿಪ ಭಕ್ತರಿಗೆ ॥ 3 ॥
**********


by ಪ್ರಸನ್ನವೆಂಕಟದಾಸರು
ಸತತ ಕಲ್ಯಾಣ ಅಚ್ಯುತ ಭಟರಿಗೆ ರತಿಪತಿಪಿತನಂಘ್ರಿರತ ಮಹಾತ್ಮರಿಗೆ ಪ.

ಆಧಿ ವ್ಯಾಧಿಗಳಿಲ್ಲ ಅಶುಭವಾರ್ತೆಗಳಿಲ್ಲಕ್ರೋಧ ನೃಪಭಯವಿಲ್ಲ ಕಾಕುಮತಿ ಇಲ್ಲಖೇದಮನಕಿಲ್ಲ ಖಿನ್ನತೆಯು ಮುಖಕಿಲ್ಲಶ್ರೀಧವನ ನವ ಭಕುತಿಶೀಲ ಜೀವರಿಗೆ 1

ಅರಿಗಳೆ ಸಖರಕ್ಕು ಅತಿವಿಷ ಅಮೃತವಕ್ಕುಉರಗಪೂಮಾಲೆಯಕ್ಕು ಉರಿ ತಣ್ಣಗಕ್ಕುಶರಧಿಗೋಷ್ಪದವಕ್ಕು ಶರಘಾತ ಬೆಂಡಕ್ಕುನರಹರಿಯ ನಾಮವನು ನಂಬಿ ತುತಿಪರಿಗೆ 2

ಪಾಪ ತಾಪಗಳ್ಗೋಟ ಪರಿದುಬಹ ಎಡರ್ಗೋಟಆಪತ್ತುಗಳಿಗೋಟ ಆಲಸ್ಯಕೋಟಕೋಪದಾರಿದ್ರ್ರ್ಯಕೋಟ ಕಲಿವ್ಯಸನ ಮದಕೋಟಶ್ರೀ ಪ್ರಸನ್ವೆಂಕಟನ ಭಜಿಪ ಭಕ್ತರಿಗೆ 3
*******