Showing posts with label ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತ prasannashreenivasa satyapriya teertha stutih. Show all posts
Showing posts with label ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತ prasannashreenivasa satyapriya teertha stutih. Show all posts

Thursday 5 August 2021

ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತ ankita prasannashreenivasa satyapriya teertha stutih

 ..

kruti by prasanna shreenivasaru ಪ್ರಸನ್ನ ಶ್ರೀನಿವಾಸದಾಸರು

ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜ ಯುಗ್ಮ

ನಿತ್ಯ ಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |

ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿ ಹಯ

ವಕ್ತ್ರ ಶ್ರೀರಾಮನಿಗೆ ಪ್ರಿಯತರ ಮಹಂತ ಪ


ಸತ್ಯವರ್ಯ ತೀರ್ಥರು ಭಾವಿ ಸತ್ಯಪ್ರಿಯರು

ಗೋದಾವರಿಯಿಂದ ರಾಯಚೂರು ಪೋಗಿ

ಆ ದೇಶ ಅಧಿಪತಿ ಪೀತಾಸಿಂಗನಿಗೆ

ಒದಗಿ ಅನುಗ್ರಹಿಸಿ ಬಂದರು ಮೇಲುಕೋಟೆ 1

ಮೇಲುಕೋಟೆ ರಾಜನು ಸ್ವಾಮಿಗಳಲಿ ಬಹು

ಭಕ್ತಿಯಿಂದಲಿ ಪೂಜೆ ಮಾಡಿದನು ಆಗ್ಗೆ

ಮೇಲುಕೋಟೆ ಗಿರಿ ಮೇಲೆ ನರಸಿಂಹನ ಗುಡಿ

ಬೀಗ ಹಾಕಿತ್ತು ಸ್ವಾಮಿಗಳು ಹೋದಾಗ 2

ಶ್ರೀ ಸ್ವಾಮಿಗಳು ಬಾಗಿಲ ಸ್ಪರ್ಶ ಮಾಡಿದರು

ಸ್ಪರ್ಶಮಾತ್ರದಿ ಬಾಗಿಲು ತೆರೆಯಿತು ಆಗ

ಶ್ರೀಸ್ವಾಮಿ ನರಸಿಂಹನ ಮುದದಿ ಪೂಜಿಸಲು

ಶ್ರೀ ಸ್ವಾಮಿಗಳ ಅರಸ ಪೂಜಿಸಿದನು 3

ತರುವಾಯ ಶ್ರೀರಂಗಪಟ್ಟಣಕೆ ಬಂದು

ಶ್ರೀರಂಗನಾಥನ್ನ ಸೇವಿಸಲು ಮುದದಿ

ಶ್ರೀರಂಗಪಟ್ಟಣದ ಅರಸನು ಭಕ್ತಿಯಿಂ

ಪರಿಪರಿವಿಧದಿ ಕಾಣಿಕೆಗಳ ಅರ್ಪಿಸಿದ 4

ರತ್ನ ಖಚಿತ ಪೂಜಾ ಸಾಧನಗಳು ಸ್ವರ್ಣ

ರಜತ ದಂಡಗಳು ಶ್ವೇತ ಛತ್ರ

ಇಂಥಾವು ಸಂಸ್ಥಾನ ಚಿಹ್ನೆಗಳ ರಾಜನು

ಇತ್ತನು ಶ್ರೀಗಳಿಗೆ ಭಕ್ತಿಪೂರ್ವಕದಿ 5

ನಂತರ ಸ್ವಾಮಿಗಳು ಶ್ರೀತುಂಗಭದ್ರಾದಿ

ತೀರ್ಥಾಟನ ಮಾಡಿ ಗದ್ವಾಲು ಸೇರಿ

ಮತ್ತೆ ತೋಂಡ ದೇಶದ ಆರ್ಕಾಟಿಗೆ ಹೋಗಿ

ಆದೇಶ ಮಂತ್ರಿಯಿಂದ ಕೊಂಡರು ಸೇವ 6

ಈ ಸಮಯ ಶ್ರೀ ಸತ್ಯವಿಜಯ ತೀರ್ಥಾರ್ಯರು

ಸಂಸ್ಥಾನ ಸಹ ಹತ್ತಿರ ಪ್ರಾಂತದಲ್ಲಿ

ಶಿಷ್ಯೋದ್ಧಾರಕ್ಕೆ ವಿಜಯ ಮಾಡುತ್ತಿರಲು

ಶ್ರೀ ಸತ್ಯವರ್ಯರು ಬಂದರು ಆರಣಿಗೆ 7

ಆರಣೀರಾಯನು ವೇಂಕಟನು ಸ್ವಾಮಿಗಳ

ಚರಣಕ್ಕೆ ಎರಗಿ ಪೂಜೆಯನ್ನು ಸಲ್ಲಿಸೇ

ವಸ್ತ್ರಾಭರಣ ಹೇಮಾಭೀಷೇಕಾದಿಗಳ

ಅರ್ಪಿಸಿದ ಭಕ್ತಿಯಿಂ ಕೃಷ್ಣಾಜಿಪಂತ 8

ಈ ರೀತಿ ಪೂಜೆ ಮರ್ಯಾದೆಗಳ ತಾ ಕೊಂಡು

ಹರಿ ಕೃಷ್ಣ ಶ್ರೀಶನಿಗೆ ಸಮಸ್ತ ಅರ್ಪಿಸುತ

ಹೊರಟರು ಮುಂದಕ್ಕೆ ದಿಗ್ವಿಜಯ ಕ್ರಮದಲ್ಲಿ

ಪುರಿ ಜನರು ಜಯ ಘೋಷ ಮಾಡುತಿರಲು 9

ಎನ್ನ ಎನ್ನಂಥವರ ಅನಂತ ಅಪರಾಧಗಳ

ಘನ ದಯದಿ ಕ್ಷಮಿಸಿ ಬಹು ಕೃಪದಿ ಪಾಹೀ

ವನರುಹಾಸನಪಿತ ಮಧ್ವಸ್ಥ ಶ್ರೀಪತಿ

`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 10 

***