Showing posts with label ಸತ್ಯಸಂಧಾರ್ಯರೆ ಶರಣಾದೆ prasannashreenivasa SATYASANDHARYARE SHARANADE SATYASANDHA TEERTHA STUTIH. Show all posts
Showing posts with label ಸತ್ಯಸಂಧಾರ್ಯರೆ ಶರಣಾದೆ prasannashreenivasa SATYASANDHARYARE SHARANADE SATYASANDHA TEERTHA STUTIH. Show all posts

Friday 27 December 2019

ಸತ್ಯಸಂಧಾರ್ಯರೆ ಶರಣಾದೆ ankita prasannashreenivasa SATYASANDHARYARE SHARANADE SATYASANDHA TEERTHA STUTIH

Audio by Vidwan Sumukh Moudgalya


ಶ್ರೀ ಪ್ರಸನ್ನ ಶ್ರೀನಿವಾಸದಾಸಾರ್ಯ ವಿರಚಿತ 

 "ಶ್ರೀ ಸತ್ಯಸಂಧತೀರ್ಥರ ಚರಿತ್ರೆ" 

ವಿಷ್ಣೋಃ ಪದಶ್ರಿದ್ಗೋವ್ರಾತೈಃ ಸ್ವಾಂತಧ್ವಾಂತನಿವಾರಕಃ।
ಶ್ರೀ ಸತ್ಯಸಂಧಸೂರ್ಯೋ ಯಂ ಭಾಸತಾಂ ನೋ ಹೃದಂಬರೇ॥

 ರಾಗ : ಹಂಸಾನಂದಿ   ಏಕತಾಳ 


ಸತ್ಯ ಸಂಧಾರ್ಯರೆ ಶರಣಾದೆ ನಿಮ್ಮಲ್ಲಿ
ಭೃತ್ಯನಾ ಎಂದೆಣಿಸಿ ನಿತ್ಯ ಪಾಲಿಸುವುದು॥ಪ॥

ಸತ್ಯಾರುಕ್ಷ್ಮಿಣೀ ರಮಣ ಕೃಷ್ಣನೃಹರಿ ರಾಮ
ಸತ್ಯಜ್ಞಾನಾನಂತನಿಗೆ ಪ್ರಿಯ ಯತೀಂದ್ರ॥ಅ.ಪ॥

ನಿರ್ದೋಷ ಗುಣಸಿಂಧು ಸುಖಪೂರ್ಣ ಹಂಸನಿಗೆ
ವಿಧಿ ಸನಕ ಮೊದಲಾದ ಗುರು ಪರಂಪರೆಗೆ
ಯತಿವರ್ಯ ಅಚ್ಚುತಪ್ರೇಕ್ಷರಿಗೆ ಆನಂದ
ತೀರ್ಥರಾಂಬುಜ ಪಾದಗಳಿಗೆ ಆನಮಿಪೆ॥೧॥

ಪದ್ಮನಾಭ ನರಹರಿ ಮಾಧವ ಅಕ್ಷೋಭ್ಯರ
ಪದ್ಮಾಂಘ್ರಿಗಳ ನಮಿಸಿ ಜಯತೀರ್ಥರ
ವಿದ್ಯಾಧಿರಾಜರ ಪಾದ ಪಂಕಜಕ್ಕೆರಗಿ
ವಿದ್ಯಾಧಿರಾಜರು ಈರ್ವರಿಗೂ ನಮಿಪೆ॥೨॥

ನಮಿಸುವೆ ರಾಜೇಂದ್ರ ಕವೀಂದ್ರ ವಾಗೀಶರಿಗೆ
ರಾಮಚಂದ್ರರಿಗೆ ಆ ಯತಿವರರ ಹಸ್ತ
ಕಮಲಜರು ವಿಭುದೇಂದ್ರ ವಿದ್ಯಾನಿಧಿಗಳಿಗೆ
ನಮೋ ಎಂಬೆ ವಿದ್ಯಾನಿಧಿಗಳ ವಂಶಕ್ಕೆ॥೩॥

ವೇದಾಂತ ಕೋವಿದರು ರಘುನಾಥ ರಘುವರ್ಯ
ಪದವಾಕ್ಯ ತತ್ವಜ್ಞ ರಘೂತ್ತಮಾರ್ಯರಿಗೆ
ವೇದ ವ್ಯಾಸಾಭಿದ ಯತಿ ವಿದ್ಯಾಧೀಶರಿಗೆ
ವೇದನಿಧಿಗಳಿಗೆ ನಾ ಬಾಗುವೆ ಶಿರವ॥೪॥

ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆ
ಸತ್ಯಾಭಿನವ ಸತ್ಯ ಪೂರ್ಣರಿಗೆ ನಮಿಪೆ
ಸತ್ಯ ವಿಜಯರಿಗೆ ಸತ್ಯ ಪ್ರಿಯರಿಗೆ ಸತ್ಯ
ಬೋಧರಿಗೆ ಎನ್ನ ವಂದನೆ ಅರ್ಪಿಸುವೆ॥೫॥

ಸತ್ಯಬೋಧಾರ್ಯರ ಕರಕಮಲ ಸಂಜಾತ
ಸತ್ಯಸಂಧರ ಮಹಿಮೆ ಬಹು ಬಹು ಬಹಳ
ವೇದ್ಯ ಕಿಂಚಿತ್ ಮಾತ್ರ ಎನಗೆ ಶ್ರೀಹರಿ ವಾಯು
ಪ್ರೀತಿಯಾಗಲಿ ಇಲ್ಲಿ ಪೇಳಿರುವೆ ಸ್ವಲ್ಪ॥೬॥

ಪೂರ್ವಾಶ್ರಮದಲ್ಲಿ ರಾಮಚಂದ್ರಾಚಾರ್ಯ
ಹಾವೇರಿಯವರು ಈ ಯತಿವರ ಮಹಂತ
ದೇವ ಸ್ವಭಾವರು ವೇದಾಂತ ಕೋವಿದರು
ಸರ್ವದಾ ಹರಿನಾಮ ಸಂಸ್ಮರಿಸುವವರು॥೭॥

ರಾಮಚಂದ್ರಾಚಾರ್ಯ ಸರ್ವಪ್ರಕಾರದಲು
ತಮ್ಮ ಸಂಸ್ಥಾನ ಪೀಠಾರ್ಹರು ಎಂದು
ನೇಮದಿಂ ಪ್ರಣವೋಪದೇಶ ಅಭಿಷೇಕ
ಸಂಮುದದಿ ಮಾಡಿದರು ಸತ್ಯಬೋಧಾರ್ಯ॥೮॥

ಹರಿಕ್ಷೇತ್ರ ತೀರ್ಥಯಾತ್ರೆ ಮಾಡಿ ಅಲ್ಲಲ್ಲಿ
ಹರಿತತ್ವ ಯೋಗ್ಯರಿಗೆ ಸಮ್‍ಯುಕ್ ಬೋಧಿಸುತ
ಧರೆಯಲ್ಲಿ ಜ್ಞಾನಿ ಶ್ರೇಷ್ಠರು ಎಂದು ಸ್ತುತಿಕೊಂಡ
ಧೀರ ಗುರುವರ ಸತ್ಯಸಂಧರಿಗೆ ನಮಿಪೆ॥೯॥

ಸತ್ಯಂ ವಿದಾತಂ ನಿಜ ಭೃತ್ಯ ಭಾಷಿತಂ
ಅಂದು ಕಂಬದಿ ತೋರ್ದ ಹರಿ ಪ್ರಹ್ಲಾದನಿಗೆ
ಇಂದು ವಟು ರೂಪದಿ ಬಂದು ವಿಠ್ಠಲ ಸತ್ಯ
ಸಂಧರಿಗೆ ತೋರಿದನು ತನ್ನಿಚ್ಛೆಯಿಂದ॥೧೦॥

ವಿಠ್ಠಲನ್ನ ವಂದಿಸಿ ಪಂಡರೀಪುರದಿಂದ
ಮಠ ಪರಿವಾರ ಸಹ ಇನ್ನೂ ಬಹು ಕ್ಷೇತ್ರ
ಅಟನ ಮಾಡಿ ಬಾಗೀರಥಿ ಪೂಜೆ ಮಾಡುತ್ತ
ಪಠವಾಳಿ ಉಡುಗೊರೆಯ ಕೊಟ್ಟರು ಗಂಗೆಗೆ॥೧೧॥

ಕಾಶಿ ನಗರದಿ ಜನರು ಪ್ರತ್ಯಕ್ಷ ನೋಡಿಹರು
ವಸ್ತ್ರ್ರಾದಿಗಳ ಗಂಗೆ ಮೂರ್ತಿಮತ್ ಬಂದು
ನಸುನಗುತ ತುಷ್ಟಿಯಲಿ ಕರದಿಂ ಸ್ವೀಕರಿಸಿದ್ದು
ಯಶವೇ ವರ್ಣಿಸಲು ಈ ಮಹಾತ್ಮರ ಮಹಿಮೆ॥೧೨॥

ಶ್ರೀವಿಷ್ಣು ಪಾದ ಮಂದಿರದ ಮುಖದ್ವಾರ
ಅವಿವೇಕದಲಿ ಗಯಾವಾಳರು ಬಂಧಿಸಲು
ಶ್ರೀವರನ್ನ ಸ್ಮರಿಸಿ ನಿಂತರು ಸತ್ಯಸಂಧರು
ವಿಶ್ವವಿಷ್ಣು ವಷಟ್ಕಾರನು ವಲಿದ ॥೧೩॥

ನೆರೆದಿದ್ದ ಜನರೆಲ್ಲ ನೋಡುತಿರೆ ಬಾಗಲ
ಭಾರಿ ಕೀಲುಗಳೆಲ್ಲ ಬಿದ್ದವು ಕೆಳಗೆ
ಈ ರೀತಿ ಅದ್ಬುತವು ಜರುಗಿದ್ದು ಕಂಡು
ಎರಗಿ ಕೊಂಡಾಡಿದರು ಅಲ್ಲಿದ್ದ ಜನರು॥೧೪॥

ತಮ್ಮ ತಪ್ಪುಗಳನ್ನು ಮನ್ನಿಸೆ ಕ್ಷಮೆ ಬೇಡಿ
ತಮ್ಮನ್ನು ಕರಕೊಂಡು ಹೋಗಿ ಗುರುಗಳಿಗೆ
ಹೇಮ ರತ್ನಾದಿಗಳ ಕಾಣಿಕೆ ಅರ್ಪಿಸಿ
ನಮಿಸಿ ಪೂಜಿಸಿದರು ಗಯಾವಾಳರು॥೧೫॥

ಸೂರಿ ಕುಲ ತಿಲಕರು ಸತ್ಯ ಸಂಧಾರ್ಯರು
ಹರಿ ಪೂಜೆ ಮಾಡುವಾಗ ಹರಿ ಶಿರಿ ವಾಯು
ಸುರನಿಕರ ಸಾನಿಧ್ಯ ಇರುವುದು ಅನುಭವಕ್ಕೆ
ಬರುವುದು ನೋಡುವ ಯೋಗ್ಯ ಭಕ್ತರಿಗೆ॥೧೬॥

ಶ್ರೀ ಹರಿ ಅರ್ಚನೆಗೆ ಸ್ವಾಮಿಗಳು ಕುಳಿತರು
ಬ್ರಾಹ್ಮಣ ಮಹಾಪುರುಷ ಓರ್ವನು ಬಂದ
ಸಹಸ್ರದಳ ಸುಂದರತರ ಕಮಲಪುಷ್ಪವ
ಶ್ರೀಹರಿಗರ್ಪಿಸೆ ಕೊಟ್ಟು ಅದೃಶ್ಯನು ಆದ॥೧೭॥

ಪ್ರಣವ ಅಷ್ಟಾಕ್ಷರಿ ಮೊದಲಾದ ಮಂತ್ರಗಳ
ಆಮ್ನಾಯ ಋಗ್ ಯಜುಸ್ಸಾಮಾಥರ್ವಣದ
ಅನುಪಮ ಮಹಾ ಇತಿಹಾಸ ಎರಡರಸಾರ
ವಿಷ್ಣು ಸಹಸ್ರನಾಮಗಳಿರುತಿವೆಯು॥೧೮॥

ಉತ್ಕೃಷ್ಟತಮ ವಿಷ್ಣು ಸಹಸ್ರ ನಾಮಂಗಳ
ಶ್ರೀ ಕೃಷ್ಣ ಸುಪ್ರೀತಿ ಕರ ವ್ಯಾಖ್ಯಾನ
ಸಂ ರಚಿಸಿ ಪ್ರತಿನಿತ್ಯ ಅರ್ಚಿಪರು ವಿಷ್ಣು
ಸೂರಿವರಧೀರರು ಸತ್ಯ ಸಂಧಾರ್ಯ॥೧೯॥

ವೇದಾಂತ ಸಾಮ್ರಾಜ್ಯ ದಶವತ್ಸರ ಆಳಿ
ವೃಂದಾವನದಿ ಕೂಡುವ ಕಾಲ ಬರಲು
ಭೂದೇವಿ ಪತಿ ವಕ್ತ್ರದಿಂದುದಿತ
ಸಾಧು ಸುಪವಿತ್ರ ತೀರಕ್ಕೆ ಬಂದಿಹರು॥೨೦॥

ಹದಿನೇಳು ನೂರು ಹದಿನಾರನೇ ಶಾಲಿ ಶಕ
ಆನಂದ ಸಂವತ್ಸರ ಜೇಷ್ಠ ಶುದ್ಧ ದ್ವಿತೀಯ
 ಪುಣ್ಯತಮ ದಿನದಲ್ಲಿ ಶ್ರೀಹರಿಯ
ಪಾದ ಯೆಯ್ದಿದರು ಈ ಗುರುವರ ಮಹಂತ॥೨೧॥

ಉಡುಪಿಯಿಂದುತ್ತರಕ್ಕೆ ಬರುವ ಮಾರ್ಗದಲಿ
ದೊಡ್ಡದಲ್ಲದ ಗ್ರಾಮ ಮಹಿಷಿ ಎಂಬುವಲಿ
ಕ್ರೋಡಜಾ ತೀರಸ್ಥ ವೃಂದಾವನ ಸದನ
ಮಾಡಿ ಕುಳಿತರು ಮತ್ತೊಂದು ಅಂಶದಲಿ॥೨೨॥

ವೃಂದಾವನದೊಳು ಇಹ ಸತ್ಯಸಂಧರೊಳು
ನಿಂತಿಹನು ಸತ್ಯಸಂಧನು ಮುಖ್ಯವಾಯು
ವಾತ ದೇವನೊಳು ಸತ್ಯಸಂಧ ನಾಮಾವಿಷ್ಣು
ಸತ್ಯ ಜ್ಞಾನಾನಂತಾನಂದ ವಾಯು ಇಹನು॥೨೩॥

ವೃಂದಾವನಸ್ಥರ ಈ ರೀತಿ ತಿಳಿಯುತ್ತ
ಬಂದು ಸೇವಿಸುವವರಿಗೂ ಸ್ಮರಿಸುವವರಿಗೂ
ಕುಂದು ಕೊರತೆ ನೀಗಿ ಇಷ್ಟಾರ್ಥ ಲಭಿಸುವವು
ಇಂದಿರಾಪತಿ ದಯಾಸಿಂಧು ಪಾಲಿಸುವನು॥೨೪॥

ಹನುಮಸ್ತ ಅಜನಪಿತ ` ಶ್ರೀ ಪ್ರಸನ್ನ ಶ್ರೀನಿವಾಸ '
ಮೀನ ಕಮಠ ಕ್ರೋಡ ನೃಹರಿ ವಟು ಪರಶು
ದನುರ್ಧರ ಶ್ರೀಕೃಷ್ಣ ಜಿನ ಕಲ್ಕಿ ಶ್ರೀಶ
ಗುಣನಿಧಿ ಪ್ರಿಯ ಸತ್ಯಸಂಧಾರ್ಯ ಶರಣು॥೨೫॥

|| ಇತಿ ಶ್ರೀ ಸತ್ಯಸಂಧ ಚರಿತ್ರೆ ಸಂಪೂರ್ಣಂ ||
*****

ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ಸಂಧರ ಚರಿತ್ರೆ

ಸತ್ಯ ಸಂಧಾರ್ಯರೆ ಶರಣಾದೆ ನಿಮ್ಮಲ್ಲಿಭೃತ್ಯನಾ ಎಂದೆಣಿಸಿನಿತ್ಯಪಾಲಿಸುವುದುಸತ್ಯಾರುಕ್ಷ್ಮಿಣೀ ರಮಣ ಕೃಷ್ಣನೃಹರಿ ರಾಮಸತ್ಯಜ್ಞಾನಾನಂತನಿಗೆ ಪ್ರಿಯ ಯತೀಂದ್ರ ಪ

ನಿರ್ದೋಷ ಗುಣಸಿಂಧು ಸುಖಪೂರ್ಣ ಹಂಸನಿಗೆವಿಧಿಸನಕಮೊದಲಾದಗುರುಪರಂಪರೆಗೆಯತಿವರ್ಯ ಅಚ್ಚುತಪ್ರೇಕ್ಷರಿಗೆ ಆನಂದತೀರ್ಥರಾಂಬುಜ ಪಾದಗಳಿಗೆ ಆನಮಿಪೆ 1

ಪದ್ಮನಾಭನರಹರಿಮಾಧವಅಕ್ಷೋಭ್ಯರಪದ್ಮಾಂಘ್ರಿಗಳ ನಮಿಸಿ ಜಯತೀರ್ಥರವಿದ್ಯಾಧಿರಾಜರಪಾದಪಂಕಜಕ್ಕೆರಗಿವಿದ್ಯಾಧಿರಾಜರು ಈರ್ವರಿಗೂ ನಮಿಪೆ 2

ನಮಿಸುವೆ ರಾಜೇಂದ್ರ ಕವೀಂದ್ರ ವಾಗೀಶರಿಗೆರಾಮಚಂದ್ರರಿಗೆ ಆ ಯತಿವರರಹಸ್ತಕಮಲಜರು ವಿಭುದೇಂದ್ರ ವಿದ್ಯಾನಿಧಿಗಳಿಗೆನಮೋ ಎಂಬೆ ವಿದ್ಯಾನಿಧಿಗಳ ವಂಶಕ್ಕೆ 3

ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದ ವ್ಯಾಸಾಭಿದ ಯತಿ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 4

ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಾಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯ ವಿಜಯರಿಗೆ ಸತ್ಯ ಪ್ರಿಯರಿಗೆ ಸತ್ಯಬೋಧರಿಗೆ ಎನ್ನ ವಂದನೆ ಅರ್ಪಿಸುವೆ 5

ಸತ್ಯಬೋಧಾರ್ಯರ ಕರಕಮಲ ಸಂಜಾತಸತ್ಯಸಂಧರ ಮಹಿಮೆ ಬಹು ಬಹು ಬಹಳವೇದ್ಯ ಕಿಂಚಿತ್ ಮಾತ್ರ ಎನಗೆ ಶ್ರೀಹರಿ ವಾಯುಪ್ರೀತಿಯಾಗಲಿ ಇಲ್ಲಿ ಪೇಳಿರುವೆ ಸ್ವಲ್ಪ 6

ಪೂರ್ವಾಶ್ರಮದಲ್ಲಿ ರಾಮಚಂದ್ರಾಚಾರ್ಯಹಾವೇರಿಯವರು ಈ ಯತಿವರಮಹಂತದೇವ ಸ್ವಭಾವರು ವೇದಾಂತ ಕೋವಿದರುಸರ್ವದಾ ಹರಿನಾಮ ಸಂಸ್ಮರಿಸುವವರು 7

ರಾಮಚಂದ್ರಾಚಾರ್ಯ ಸರ್ವಪ್ರಕಾರದಲುತಮ್ಮ ಸಂಸ್ಥಾನ ಪೀಠಾರ್ಹರು ಎಂದುನೇಮದಿಂ ಪ್ರಣವೋಪದೇಶ ಅಭಿಷೇಕಸಂಮುದದಿ ಮಾಡಿದರು ಸತ್ಯಬೋಧಾರ್ಯ 8

ಹರಿಕ್ಷೇತ್ರ ತೀರ್ಥಯಾತ್ರೆ ಮಾಡಿ ಅಲ್ಲಲ್ಲಿಹರಿತತ್ವ ಯೋಗ್ಯರಿಗೆ ಸಮ್‍ಯುಕ್ ಬೋಧಿಸುತಧರೆಯಲ್ಲಿಜ್ಞಾನಿಶ್ರೇಷ್ಠರು ಎಂದು ಸ್ತುತಿಕೊಂಡಧೀರ ಗುರುವರ ಸತ್ಯಸಂಧರಿಗೆ ನಮಿಪೆ 9

ಸತ್ಯಂ ವಿದಾತಂ ನಿಜಭೃತ್ಯಭಾಷಿತಂಅಂದು ಕಂಬದಿ ತೋರ್ದಹರಿಪ್ರಹ್ಲಾದನಿಗೆಇಂದುವಟುರೂಪದಿ ಬಂದು ವಿಠ್ಠಲ ಸತ್ಯಸಂಧರಿಗೆ ತೋರಿದನು ತನ್ನಿಚ್ಛೆಯಿಂದ 10

ವಿಠ್ಠಲನ್ನ ವಂದಿಸಿ ಪಂಡರೀಪುರದಿಂದಮಠ ಪರಿವಾರ ಸಹ ಇನ್ನೂ ಬಹು ಕ್ಷೇತ್ರಅಟನ ಮಾಡಿ ಬಾಗೀರಥಿ ಪೂಜೆ ಮಾಡುತ್ತಪಠವಾಳಿ ಉಡುಗೊರೆಯ ಕೊಟ್ಟರು ಗಂಗೆಗೆ 11

ಕಾಶಿ ನಗರದಿ ಜನರು ಪ್ರತ್ಯಕ್ಷ ನೋಡಿಹರುವಸ್ತ್ರ್ರಾದಿಗಳ ಗಂಗೆ ಮೂರ್ತಿಮತ್ ಬಂದುನಸುನಗುತ ತುಷ್ಟಿಯಲಿ ಕರದಿಂ ಸ್ವೀಕರಿಸಿದ್ದುಯಶವೇ ವರ್ಣಿಸಲು ಈ ಮಹಾತ್ಮರ ಮಹಿಮೆ 12

ಶ್ರೀವಿಷ್ಣುಪಾದಮಂದಿರದ ಮುಖದ್ವಾರಅವಿವೇಕದಲಿ ಗಯಾವಾಳರು ಬಂಧಿಸಲುಶ್ರೀವರನ್ನ ಸ್ಮರಿಸಿ ನಿಂತರು ಸತ್ಯಸಂಧರುವಿಶ್ವವಿಷ್ಣು ವಷಟ್ಕಾರನು ವಲಿದ 13

ನೆರೆದಿದ್ದ ಜನರೆಲ್ಲ ನೋಡುತಿರೆ ಬಾಗಲಭಾರಿ ಕೀಲುಗಳೆಲ್ಲ ಬಿದ್ದವು ಕೆಳಗೆಈ ರೀತಿ ಅದ್ಬುತವು ಜರುಗಿದ್ದು ಕಂಡುಎರಗಿ ಕೊಂಡಾಡಿದರು ಅಲ್ಲಿದ್ದ ಜನರು 14

ತಮ್ಮ ತಪ್ಪುಗಳನ್ನು ಮನ್ನಿಸೆಕ್ಷಮೆಬೇಡಿತಮ್ಮನ್ನು ಕರಕೊಂಡು ಹೋಗಿ ಗುರುಗಳಿಗೆಹೇಮರತ್ನಾದಿಗಳಕಾಣಿಕೆಅರ್ಪಿಸಿನಮಿಸಿ ಪೂಜಿಸಿದರು ಗಯಾವಾಳರು 15

ಸೂರಿಕುಲ ತಿಲಕರು ಸತ್ಯ ಸಂಧಾರ್ಯರುಹರಿಪೂಜೆ ಮಾಡುವಾಗಹರಿಶಿರಿ ವಾಯುಸುರನಿಕರ ಸಾನಿಧ್ಯ ಇರುವುದು ಅನುಭವಕ್ಕೆಬರುವುದು ನೋಡುವ ಯೋಗ್ಯ ಭಕ್ತರಿಗೆ 16

ಶ್ರೀಹರಿಅರ್ಚನೆಗೆ ಸ್ವಾಮಿಗಳು ಕುಳಿತರುಬ್ರಾಹ್ಮಣ ಮಹಾಪುರುಷ ಓರ್ವನು ಬಂದಸಹಸ್ರದಳ ಸುಂದರತರ ಕಮಲಪುಷ್ಪವಶ್ರೀಹರಿಗರ್ಪಿಸೆ ಕೊಟ್ಟು ಅದೃಶ್ಯನು ಆದ 17

ಪ್ರಣವಅಷ್ಟಾಕ್ಷರಿ ಮೊದಲಾದ ಮಂತ್ರಗಳಆಮ್ನಾಯಋಗ್ ಯಜುಸ್ಸಾಮಾಥರ್ವಣದಅನುಪಮ ಮಹಾ ಇತಿಹಾಸ ಎರಡರಸಾರವಿಷ್ಣು ಸಹಸ್ರನಾಮಗಳಿರುತಿವೆಯು 18

ಉತ್ಕøಷ್ಟತಮ ವಿಷ್ಣು ಸಹಸ್ರ ನಾಮಂಗಳಶ್ರೀ ಕೃಷ್ಣ ಸುಪ್ರೀತಿಕರವ್ಯಾಖ್ಯಾನಸಂ ರಚಿಸಿ ಪ್ರತಿನಿತ್ಯ ಅರ್ಚಿಪರು ವಿಷ್ಣುಸೂರಿವರಧೀರರು ಸತ್ಯ ಸಂಧಾರ್ಯ 19

ವೇದಾಂತ ಸಾಮ್ರಾಜ್ಯ ದಶವತ್ಸರ ಆಳಿವೃಂದಾವನದಿ ಕೂಡುವಕಾಲಬರಲುಭೂದೇವಿಪತಿವಕ್ತ್ರದಿಂದುದಿತಸಾಧು ಸುಪವಿತ್ರ ತೀರಕ್ಕೆ ಬಂದಿಹರು 20

ಹದಿನೇಳು ನೂರು ಹದಿನಾರನೇ ಶಾಲಿ ಶಕಆನಂದ ಸಂವತ್ಸರ ಜೇಷ್ಠ ಶುದ್ಧದ್ವಿತೀಯಪುಣ್ಯತಮ ದಿನದಲ್ಲಿ ಶ್ರೀಹರಿಯಪಾದಯೆಯ್ದಿದರು ಈ ಗುರುವರಮಹಂತ21

ಉಡುಪಿಯಿಂದುತ್ತರಕ್ಕೆ ಬರುವ ಮಾರ್ಗದಲಿದೊಡ್ಡದಲ್ಲದ ಗ್ರಾಮಮಹಿಷಿಎಂಬುವಲಿಕ್ರೋಡಜಾ ತೀರಸ್ಥ ವೃಂದಾವನಸದನಮಾಡಿ ಕುಳಿತರು ಮತ್ತೊಂದು ಅಂಶದಲಿ 22

ವೃಂದಾವನದೊಳು ಇಹ ಸತ್ಯಸಂಧರೊಳುನಿಂತಿಹನು ಸತ್ಯಸಂಧನು ಮುಖ್ಯವಾಯುವಾತದೇವನೊಳು ಸತ್ಯಸಂಧ ನಾಮಾವಿಷ್ಣುಸತ್ಯಜ್ಞಾನಾನಂತಾನಂದ ವಾಯು ಇಹನು 23

ವೃಂದಾವನಸ್ಥರ ಈ ರೀತಿ ತಿಳಿಯುತ್ತಬಂದು ಸೇವಿಸುವವರಿಗೂ ಸ್ಮರಿಸುವವರಿಗೂಕುಂದುಕೊರತೆನೀಗಿಇಷ್ಟಾರ್ಥ ಲಭಿಸುವವುಇಂದಿರಾಪತಿ ದಯಾಸಿಂಧು ಪಾಲಿಸುವನು 24

ಹನುಮಸ್ತ ಅಜನಪಿತ `ಶ್ರೀ ಪ್ರಸನ್ನ ಶ್ರೀನಿವಾಸ'ಮೀನಕಮಠಕ್ರೋಡನೃಹರಿವಟುಪರಶುದನುರ್ಧರ ಶ್ರೀಕೃಷ್ಣ ಜಿನ ಕಲ್ಕಿ ಶ್ರೀಶಗುಣನಿಧಿ ಪ್ರಿಯ ಸತ್ಯ ಸಂಧಾರ್ಯ ಶರಣು 25

 ಪ|| ಇತಿ ಶ್ರೀ ಸತ್ಯಸಂಧ ಚರಿತ್ರೆ ಸಂಪೂರ್ಣಂ ||
*******