Showing posts with label ಸರಿಯಾರೈ ಜಯಮುನಿ ಸಮರಾರೈ vasudeva vittala. Show all posts
Showing posts with label ಸರಿಯಾರೈ ಜಯಮುನಿ ಸಮರಾರೈ vasudeva vittala. Show all posts

Friday 27 December 2019

ಸರಿಯಾರೈ ಜಯಮುನಿ ಸಮರಾರೈ ankita vasudeva vittala

ಸರಿಯಾರೈ ಜಯಮುನಿ ಸಮರಾರೈ
ಗುರುಮಧ್ವಕೃತಿ ವಿವೃತಿ ರಚಿಸುವಲ್ಲಿ ||pa||

ವರ್ಣವಂದಾರು ಬಿಡದಲೆ ಬಹುಫಲ
ವರ್ಣಿಪೆ ಲೋಭದಿ ಶರಣ ಜನರಿಗೆ
ಕರ್ಣಸುಧಾರಸ ಬೆರೆದು ನೀ ಬಲುಗೂಢ
ಪೂರ್ಣಮತಿ ಭಾವವ ತೆಗೆವತಿ ಶೂರ ||1||

ಒಂದೊಂದು ವಚನವ ಹಿಂದಾಗಿ ಮುಂದಾಗಿ
ಛಂದಾಗಿ ತಿರಿಗಿಸಿ ತಿರೆಯ ಸಿಂಧುರದಂತೆ
ಬಂದಿಸಿ ಮುಂದಾಗಿ ಬಂದು ದುರ್ವಾದಿಯ
ಸಂದುಗಳನೆ ಸೀಳಿ ಮೆರೆದತಿ ಶೂರ ||2||

ಕತ್ತಿಯ ಒಂದೇ ಹಿಡದೆ ಬಿಡದಲೆವೆ
ಹತ್ತು ದಿಕ್ಕಿಗೆ ತಿರಿಗಿಪ್ಪ ವೀರನ ತೆರೆ
ಅತ್ಯರ್ಥ ಮೂಲದ ಹಿಡಿದು ಅದನ್ನು
ಸುತ್ತಿಸಿ ವಿಮತರ ತತ್ತರಿಸುವ ಧೀರ||3||

ಮೂಲ ವಚನಗಳ ಕಲ್ಪಲತೆಯ ಮಾಡಿ
ಮೇಲಾದ ತತ್ವಗಳೆಂಬೊ ಫಲಗಳು
ಶೀಲಮತಿಗಳುಳ್ಳ ಶಿಷ್ಯ ಶಿಶುವಿಗಳಿ
ಗಾಲಿಸಿ ಮೇಳಿಸುತ ಒಲಿಸುವ ಧೀರ ||4||

ಅಕ್ಷೋಭ್ಯ ಮುನಿಗಳ ಪುಣ್ಯಫಲಗಳೆಂತೊ
ಕರ್ಮ ಕಷ್ಟವೆ ಒದಗಿತು
ಈ ಕ್ಷೋಣಿತಳದಲ್ಲಿ ವಾಸುದೇವವಿಠಲನಕಕ್ಷವ
ವೊಹಿಸಿ ಪುಟ್ಟಿದ್ಯೊ ಜಯರಾಯ||5||
*******