Showing posts with label ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ others prasannavenkata dasa stutih. Show all posts
Showing posts with label ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ others prasannavenkata dasa stutih. Show all posts

Friday 27 December 2019

ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ ಪ್ರಸನ್ನವೆಂಕಟನ್ನ others prasannavenkata dasa stutih

song on prasanna venkata dasa
ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ ರ್ಚಿತನಾದ ಸಿರಿ ಪ್ರಸನ್ನವೆಂಕಟನ್ನ||
ನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ||pa||

ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳು
ದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲು
ಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲು
ತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು ||1||

ಹಸನಾಗಿ ಕಪಿಲ ತೀರ್ಥದಲಿ ಮಜ್ಜನಗೈದು ಶಶಿಧರನ ಅಡಿಗಳಿಗೆರಗಿ
ಎಸೆವ ಪರ್ವತಾರೋಹಣವ ಮಾಡಿ ಸ್ವಾಮಿ ಪುಷ್ಕರಣಿ ತೀರ್ಥದಲಿಮುಳುಗಿ
ಬಿಸಜದಾಳಾಕ್ಷ ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿ
ಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ ||2||

ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿ
ನಂದದಿಂದೆಚ್ಚೆತ್ತು e್ಞÁನವುದಿಸೆ ಮುಕುಂದನ ಕಂಡು ಎದೆಯಲಿ
ಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿ
ಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ||3||

ಹಿತದಿ ಮಾತಿಗೆ ಬಂದಚ್ಯುತನ ನಾಮಾವಳಿ ಅತಿಶಯ ಭಕುತಿ ಪೂರ್ವಕದಿ
ಸತತ ಅನೇಕ ಗ್ರಂಥಗಳು ದಶಮಸ್ಕಂಧ ಭಾಗವತ ಪೂರ್ವಾರ್ಧಕನ್ನಡದಿಮತಿ
ಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ
ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ ||4||

ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯ
ಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯ
ಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ
ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ||5||
*******