Showing posts with label ಸಿರಿವಿರಿಂಚಿ ಭವೇಂದ್ರಾದಿ ಸುರರಿಂದರ್ಚಿತನಾದ ramapati vittala prasanna venkata dasa stutih. Show all posts
Showing posts with label ಸಿರಿವಿರಿಂಚಿ ಭವೇಂದ್ರಾದಿ ಸುರರಿಂದರ್ಚಿತನಾದ ramapati vittala prasanna venkata dasa stutih. Show all posts

Saturday 1 May 2021

ಸಿರಿವಿರಿಂಚಿ ಭವೇಂದ್ರಾದಿ ಸುರರಿಂದರ್ಚಿತನಾದ ankita ramapati vittala prasanna venkata dasa stutih

ಕಾಖಂಡಕಿ ಪ್ರಸನ್ನ ವೆಂಕಟದಾಸರ stutih

ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ ರ್ಚಿತನಾದ ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ


ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1

ಹಸನಾಗಿ ಕಪಿಲ ತೀರ್ಥದಲಿ ಮಜ್ಜನಗೈದು ಶಶಿಧರನ ಅಡಿಗಳಿಗೆರಗಿಎಸೆವ ಪರ್ವತಾರೋಹಣವ ಮಾಡಿ ಸ್ವಾಮಿ ಪುಷ್ಕರಣಿ ತೀರ್ಥದಲಿಮುಳುಗಿಬಿಸಜದಾಳಾಕ್ಷ ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2

ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು e್ಞÁನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3

ಹಿತದಿ ಮಾತಿಗೆ ಬಂದಚ್ಯುತನ ನಾಮಾವಳಿ ಅತಿಶಯ ಭಕುತಿ ಪೂರ್ವಕದಿಸತತ ಅನೇಕ ಗ್ರಂಥಗಳು ದಶಮಸ್ಕಂಧ ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4

ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5

****

 ಶ್ರೀ ರಮಾಪತಿ ವಿಠಲರು...

ರಾಗ : ರೇಗುಪ್ತಿ ತಾಳ : ಝ೦ಪೆ

ಸಿರಿ ವಿರಿಂಚಿ ಭವೇಂದ್ರಾದಿ ಸುರರಿಂದರ್ಚಿತನಾದ ।

ಸಿರಿ ಪ್ರಸನ್ವೇ೦ಕಟನ್ನ ನಿರುತ ।

ಸ್ಮರಿಪ ಕಾಖಂಡಕೀ ವೆಂಕಪ್ಪನವರ ।

ಚರಣವನೆ ನೆನೆವನೆ ಧನ್ಯಾ - ಮಾನ್ಯ ।। ಪಲ್ಲವಿ ।।


ಮರುತಮತಾಬ್ಧಿ ಮರಕತ ।

ಭೂಸುರ ಜನ್ಮ ಧರನಾಗಿ ಭುವಿಯೊಳುದಿಸಲು ।

ತರಳತ್ವ ಕಳೆದು ತರುಣ ತನ ಬರಲಿನ್ನು ।

ಅರಿವೆ ಕಾಣದೆ ಇರುತಿರಲು ।।

ಹರಿ ನಾಮಾವಳಿಗಳ ಬರೆದು ಓದುವ ಭಾಗ್ಯ ।

ಅರಿವೆನೆಂದರೆ ಬಾರದಿರಲು ।

ತೊರೆದು ಮನೆಯವರ ಗಿರಿಯಾತ್ರೆ । ಮಾ ।

ಳ್ಪನನುಸರಿಸಿ ತೆರಳು ತಿರಲು ।। ಚರಣ ।।

****