Showing posts with label ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ankita karpara narahari SMARISUVA NARANE DHANYA SANMAANYA APPAVARA STUTIH. Show all posts
Showing posts with label ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ankita karpara narahari SMARISUVA NARANE DHANYA SANMAANYA APPAVARA STUTIH. Show all posts

Saturday 4 December 2021

ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ankita karpara narahari SMARISUVA NARANE DHANYA SANMAANYA APPAVARA STUTIH



" ಶ್ರೀ ಕಾರ್ಪರ ನರಹರಿದಾಸರು "

ಸ್ಮರಿಸುವ ನರನೇ ಧನ್ಯ ಸನ್ಮಾನ್ಯ || ಪ ||

ಸ್ಮರಿಸುವರಿಗೆ ಸುರತರುಕಲ್ಪ । ವಿ ।
ಭರಾಮಪುರದಿ ಶ್ರೀಹರಿ । ಧ್ಯಾನ ।
ಪರ ಶ್ರೀ ಕೃಷ್ಣಾಚಾರ್ಯರ ||ಅ.ಪ ||

ಭರತ ಭೂಮಿಯೊಳವತರಿಸಿ ದೇವಾಂಶದಿ ।
ಪುರುಹೂತನಂತೆ ಗಜಾಂತ ವೈಭವದಿಂದ ।
ಮೆರೆಯುತ ತಮ್ಮಯ ಚರಣಾರಾಧಕರನು- ।
ದ್ದರಿಸಲೋಸುಗದಿ ಸಂಚರಿಸುತ ಮುದದಿ ।।
ಸಂದರುಶನದಿಂಧಾಘವ ಕಳೆದು ಬಲು ।
ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ-।
ನರ ಪೊರೆವ ಭೂಸುರರೊಳು ।
ಮರುತ ಮತಾಬ್ಧಿ ಚಂದಿರನೆನಿಸಿದವರ ।। ಚರಣ ।।

ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ।
ಶಿರಪರಿಯಂತರ ಗುರುಗಳಾಕೃತಿಯನ್ನು ।
ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ।
ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ।।
ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ।
ಸುಂದರವಾದ ಮುಖದೊಳು ಮಂದಸ್ಮಿರ ।
ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ।
ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ ।। ಚರಣ ।।

ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ।
ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ।
ಅಪರಿಮಿತ ಮಹಿಮರೆಂದರಿಯದೆ ಇವರನ್ನು ।
ಜರಿಯಲಾಕ್ಷಣದಲಿ ಅರಿತು ಭೀಕರವಾದ ।।
ಉರಗರೂಪವ ತೋರುತ ತ್ಯಜಿಸಿ ಮತ್ತೆ । ನಿ ।
ಜರೂಪದಿಂದಿರುತ ನೋಳ್ಪರಿಗತ್ಯಾ।
ಶ್ಚರ್ಯ ಸದ್ಗುಣಭರಿತ ಕಾರ್ಪರ ।
ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ |
*********

ಕಾರ್ಪರ ನರಹರಿದಾಸರು ಶ್ರೀ ಅಪ್ಪಾವರ ಮೇಲೆ ರಚಿಸಿದ ಕೃತಿ


ಸ್ಮರಿಸುವ ನರನೇ ಧನ್ಯ ಸನ್ಮಾನ್ಯ || ಪ ||


ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ

ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ||ಅ.ಪ ||


ಭರತ ಭೂಮಿಯೊಳವತರಿಸಿ ದೇವಾಂಶದಿ

ಪುರುಹೂತನಂತೆ ಗಜಾಂತ ವೈಭವದಿಂದ

ಮೆರೆಯುತ ತಮ್ಮಯ ಚರಣಾರಾಧಕರನು-

ದ್ದರಿಸಲೋಸುಗದಿ ಸಂಚರಿಸುತ ಮುದದಿ

ಸಂದರುಶನದಿಂಧಾಘವ ಕಳೆದು ಬಲು

ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ-

ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ

ಚಂದಿರನೆನಿಸಿದವರ |


ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ

ಶಿರಪರಿಯಂತರ ಗುರುಗಳಾಕೃತಿಯನ್ನು

ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ

ಪರಿಶೋಭಿಸುವ ರತ್ನಾಭರಣದಿಂದೋಪ್ಪುವ

ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ

ಸುಂದರವಾದ ಮುಖದೊಳು ಮಂದಸ್ಮಿರ

ಕಸ್ತೂರಿಯಂತೆ ಪರಿಮಳಾನ್ವಿತ ಶರೀರ

ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ |


ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ

ವರಪುತ್ರ ಸೌಖ್ಯವ ಕರುಣಿಸುವರು ಸತ್ಯ

ಅಪರಿಮಿತ ಮಹಿಮರೆಂದರಿಯದೆ ಇವರನ್ನು

ಜರಿಯಲಾಕ್ಷಣದಲಿ ಅರಿತು ಭೀಕರವಾದ

ಉರಗರೂಪವ ತೋರುತ ತ್ಯಜಿಸಿ ಮತ್ತೆ

ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣಭರಿತ  ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ |

*****