Showing posts with label ಹೀಂಗರಿದವ ಜ್ಞಾನಿ ಅವ್ಯಕ್ತದಲುದಿಸುದು ಪ್ರತಿಮೆಗಳು gurumahipati. Show all posts
Showing posts with label ಹೀಂಗರಿದವ ಜ್ಞಾನಿ ಅವ್ಯಕ್ತದಲುದಿಸುದು ಪ್ರತಿಮೆಗಳು gurumahipati. Show all posts

Wednesday 1 September 2021

ಹೀಂಗರಿದವ ಜ್ಞಾನಿ ಅವ್ಯಕ್ತದಲುದಿಸುದು ಪ್ರತಿಮೆಗಳು ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಹೀಂಗರಿದವ ಜ್ಞಾನಿ ಪ 


ಅವ್ಯಕ್ತದಲುದಿಸುದು ಪ್ರತಿಮೆಗಳು | ವ್ಯಕ್ತದಲಡಗುವದೀ ಸಕಲು | ಈ ವ್ಯವಹಾರದ ಭ್ರಮೆ ಮಾತುಗಳು 1 

ಥೆರೆ ನೆರೆ ಬೊಬ್ಬುಳಿ ತಾ ದಿಟವಲ್ಲಾ | ತೋರಿಕರಿಗಿದರೇನು ಯಲ್ಲಾ | ನೀರಿಗೆ ಜನ್ಮ ಮರಣವಿಲ್ಲಾ 2 

ಕಿರಣದಿ ದೋರಿತು ನದಿಗಡ ಪೂರಾ | ಹೊರತಾಗಿರದು ಕಿರಣಕ ದೂರಾ | ಕಿರಣೇ ಆಯಿತು ತಾ ಮೃಗನೀರಾ 3 

ಕದಳಿಯ ಗಿಡರೂಪದ ಪದರೆಲ್ಲಾ | ಬಿದರಿಸಿ ನೋಡಲು ಏನುಳಿಲಿಲ್ಲಾ | ಪರಿ ಪ್ರಪಂಚದ ಸೊಲ್ಲಾ 4 

ಗುರುವರ ಮಹಿಪತಿಸ್ವಾಮಿಯ ಕಂಡು | ಅರ್ಹವಿಕೆ ಮಾತ್ರವನೇ ಪಡಕೊಂಡು | ಚರಿಸುವಾ ಅನುಭವ ನೆಲೆಗೊಂಡು 5

***