Showing posts with label ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀವತ್ಪಿತಾಮಹ ಜನಕನೇ uragadrivasa vittala. Show all posts
Showing posts with label ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀವತ್ಪಿತಾಮಹ ಜನಕನೇ uragadrivasa vittala. Show all posts

Monday 2 August 2021

ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀವತ್ಪಿತಾಮಹ ಜನಕನೇ ankita uragadrivasa vittala

ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ-

ವತ್ಪಿತಾಮಹ ಜನಕನೇ ಪ


ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ-

ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ


ನಾ ನಿತ್ಯ ನೀ ನಿತ್ಯ ಜಗವೆಲ್ಲವು ನಿತ್ಯವು

ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು

ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ-

e್ಞÁನಾಂಧಕಾರದಿಂ ಧ್ಯಾನವನು ತಿಳಿಯದೇ

ಕಾನನದೊಳಿಪ್ಪೆನೋ e್ಞÁನಗಮ್ಯನೆಂದು

ಸಾರುತಿದೆ ಶ್ರುತಿ ಶಾಸ್ತ್ರ e್ಞÁನಗುರು ದೊರೆತಿಲ್ಲವೋ

ಸಾನುರಾಗದಿ ನೀನೆ ಸಾಧನಕೆ ಕರುಣಿಸಿ

ಧ್ಯಾನದಲಿ ಮನಸು ನಿಲಿಸೋ ಉಳಿಸೋ 1

ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು

ಎಂದೆಂದಿಗು ಪೇಳುತಿಹರು

ಸಿಂಧುಶಯನನೆ ಭವಬಂಧಮೋಚಕನೆಂದು

ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ

ಮಂದಮತಿಯಿಂದಲಿ ವಂದಿಸಲು ನಾನರಿಯೆನೊ

ಕಂದರ್ಪಜನಕ ನೀ ಮಂದಭಾಗ್ಯನ ಮನವ

ನೋಯಿಸದೆ ನಿನ್ನ ಪದದಲ್ಲಿರಿಸೊ

ಅಂದೆ ಎನ್ನಯ ಭವಬಂಧನಾಶವಾಗುವು-

ದೊಂದೆ ನಿನ್ನನು ಬೇಡುವೆನೊ ಜೀಯ 2

ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ-

ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು

ಭವಕೆ ಕಾರಣವಹುದು ದೇವೇಶ ನಿನ್ನಾಟವೋ

ಶ್ರವಣದಿಂದಲಿ ಭವಬಂಧಮೋಚಕನೆಂದು

ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ

ಕಾವ ಕರುಣಿ ನೀನೆ ಭಾವಜನ ಪಿತನು ಅದೇ

ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ

ತವ ಪಾದ ಬಿಗಿವೆನಯ್ಯ ಜೀಯ 3

ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ-

ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ

ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ

ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು-

ತಂತ್ರವನು ನಾ ಮಾಡುವೆ ಸ್ವಾ-

ತಂತ್ರನು ನೀನು ಸೂತ್ರನಾಮಕ ದೇವ

ಮಂತ್ರಿಯಾಗೀದೇವ ಯಂತ್ರ ನಡೆಸುವ

ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ

ಭ್ರಾಂತಿಪರಿಹರಿಸಿ ಕಾಯೊ ಶೌರೇ 4

ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ

ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು

ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು

ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ

ಸಕ್ತವಾಗಲಿ ನಿನ್ನ ಪದದಿ ಮನಸು

ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು

ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ

ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ

ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5

ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ

ವೇದವೇದಾಂತವೇದ್ಯ ಸಾಧನವು ಕಾಣೆ

ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ

ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು

ಶ್ರೀಧರಾ ನಿನ್ನ ಮರೆದೇ ಭೂಧನಾಯೋಷಿತ ವಾಂಛಿತಾದಿಂದೆ

ನಾ ಅಧಮತಮಸಾಧನವನ್ನೆಸಗಿದೆ

ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು

ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6

ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ

ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ

ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ

ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ

ಸಂಕಟಾಗಾಮಿಗಳ ಕಂಟಕವ ಹರಿಸಿ ಪದ

ಪಂಕಜದಿ ಮನವ ನಿಲ್ಲಿಸೋ

ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ-

ಳಂಕಮಹಿಮ ಕಾಯೋ ಜೀಯಾ7

****