Showing posts with label ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ narahari P. Show all posts
Showing posts with label ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ narahari P. Show all posts

Thursday 5 August 2021

ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ankita narahari P

 ..

kruti by pradyumna teertha ಪ್ರದ್ಯುಮ್ನತೀರ್ಥರು


ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ

ಸಾಗರಶಯನ ಕೃಷ್ಣಾ ಪ


ಭಾಗವತರ ಸಂಗ ಬೇಗದಿಂದಲಿ ಇತ್ತು

ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ


ಬಾಲೇರ ಸಲುವಾಗಿ ಕೀಳು ಜನರಲ್ಲಿ

ಶೀಲ ಜರಿದು ಯಾಚಿಸಿ

ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ

ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1

ಅಂಗಜನಾಟಕೆ ಹಗಲಿರುಳೆನ್ನದೆ ಪರ

ಅಂಗನೆರ ಕೂಡಿ

ಮಂಗಳಮಹಿಮ ತುರಂಗ ವದನ ದೇವ

ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2

ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ

ಕಾರುಣ್ಯದಲಿ ಭಕ್ತನ

ಅರಿಷಟ್ಕರನೆ ಕೊಂದು ಕರಿವರದನೆ ಘೋರ

ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3

***